Don't Miss!
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- News Asianet Digital Network Survey: ಮತ್ತೊಮ್ಮೆ ಮೋದಿಗೆ ಜೈ ಎಂದ ಮತದಾರರು!
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೋಗಿಗಳಲ್ಲಿ ಹೊಸ ಚೈತನ್ಯ ತುಂಬಿದ ರಜನಿಕಾಂತ್
ಅನಾರೋಗ್ಯದಿಂದ ಬಳಲುತ್ತಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಈಗಷ್ಟೆ ಸೇಂಟ್ ಇಸಬೆಲ್ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದಾರೆ. ಬಳಿಕ ಅವರು ಆಸ್ಪತ್ರೆಯಲ್ಲಿದ್ದ ಇತರೆ ರೋಗಿಗಳ ಕ್ಷೇಮ ಸಮಾಚಾರವನ್ನು ವಿಚಾರಿಸಿದ್ದಾಗಿ ವೈದ್ಯರು ತಿಳಿಸಿದ್ದಾರೆ. ರಜನಿಯನ್ನು ಕಂಡ ರೋಗಿಗಳ ಮುಖದಲ್ಲೂ ಹೊಸ ಚೈತನ್ಯ ಕಂಡುಬಂದಿದೆಯಂತೆ.
ಆಸ್ಪತ್ರೆಯಲ್ಲಿ ತೀರಾ ಬಳಲುತ್ತಿದ್ದ ರೋಗಿಗಳು ರಜನಿಯನ್ನು ಮಾತುಗಳನ್ನು ಕೇಳಿ ಹೊಸ ಹುರುಪು, ಹುಮ್ಮಸ್ಸಿನಿಂದ ಕುಣಿದಾಡಿದರಂತೆ. "ರಜನಿ ಆರೋಗ್ಯ ಸದೃಢವಾಗಿದೆ. ಬೇರೆಯವರ ಆರೋಗ್ಯದ ಬಗ್ಗೆ ಅವರು ವಹಿಸಿದ ಕಾಳಜಿ ನಿಜಕ್ಕೂ ಅಭಿನಂದನಾರ್ಹ" ಎಂದಿದ್ದಾರೆ ಆಸ್ಪತ್ರೆ ವೈದ್ಯರು. ರಜನಿ ಕಳೆದ ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದರು.
ಏಪ್ರಿಲ್ 29ರಂದು ಅವರ ಹೊಸ ಚಿತ್ರ 'ರಣ' ಆರಂಭವಾದ ದಿನವೇ ರಜನಿ ಆರೋಗ್ಯ ಕೈಕೊಟ್ಟಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇನ್ನೇನು ಚಿತ್ರೀಕರಣ ಆರಂಭಿಸಬೇಕು ಅನ್ನುವಷ್ಟರಲ್ಲಿ ಮತ್ತೆ ಅನಾರೋಗ್ಯಕ್ಕೆ ತುತ್ತಾದರು. ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದು, ಆಸ್ಪತ್ರೆಯಿಂದ ಶೀಘ್ರದಲ್ಲೆ ಬಿಡುಗಡೆಯಾಗಲಿದ್ದಾರೆ ಎನ್ನುತ್ತವೆ ಮೂಲಗಳು.