Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಂಕರ ನಾಗ್ ನೆನಪಿನಲ್ಲಿ ಆಟೋ ರಾಜರು
ರಾಜ್ಯದ ಹಲವೆಡೆ ಆಟೋ ರಾಜನ ಹುಟ್ಟುಹಬ್ಬವನ್ನು ಅಭಿಮಾನಿ ಬಳಗ ಮತ್ತು ಕಲಾವಿದರ ಸಂಘಗಳು ವಿಶಿಷ್ಟವಾಗಿ ಆಚರಿಸಿದವು. ಹಲವು ಆಟೋ ನಿಲ್ದಾಣಗಳಲ್ಲಿ ಆಟೋ ಚಾಲಕರು ಸಿಹಿ ಹಂಚುವ ಮೂಲಕ ಶಂಕರ್ ನಾಗ್ ಜನುಮ ದಿನವನ್ನು ಆಚರಿಸಿದರು. ಆಟೋ ರಾಜ ಚಿತ್ರದ ಮೂಲಕ ಶಂಕರ್ ನಾಗ್ ಆಟೋ ಚಾಲಕರ ಆರಾಧ್ಯ ದೈವವಾಗಿ ಬದಲಾಗಿದ್ದು ಇತಿಹಾಸ. ಶಂಕರಣ್ಣ ಎಂದರೆ ಕೇವಲ ಅಭಿಮಾನಿಗಳಿಗಷ್ಟೇ ಅಲ್ಲ ಆಟೋ ಚಾಲಕರಿಗೂ ಎಲ್ಲಿಲ್ಲದ ಅಕ್ಕರೆ, ಅಭಿಮಾನ.
ಖಾಕಿ ತೊಡುವ ಮೂಲಕ ಪೊಲೀಸ್ ಚಿತ್ರಗಳನ್ನು ಹೀಗೂ ತೆಗೆಯಬಹುದು ಎಂದು ತೋರಿಸಿಕೊಟ್ಟಿದ್ದರು. ಅವರ ಪ್ರಯೋಗಗಳು ಒಂದೇ ಎರಡೇ. ನಂದಿಬೆಟ್ಟಕ್ಕೆ ರೋಪ್ ವೇ ಹಾಕುವ ಕನಸು, ಫ್ಲೈ ಓವರ್ ಗಳ ಕಲ್ಪನೆಯೇ ಇಲ್ಲದ ಕಾಲದಲ್ಲಿ ಅವುಗಳ ಬಗ್ಗೆ ಯೋಚನೆ, ಸಾರ್ವಜನಿಕರಿಗೆ ಕಂಟ್ರಿ ಕ್ಲಬ್ಬು ಹೀಗೇ ಅವರ ಕನಸುಗಳು ಬರೀ ಚಿತ್ರರಂಗಕ್ಕಷ್ಟೇ ಸೀಮಿತವಾಗಿರಲಿಲ್ಲ.ಹೇಳುತ್ತಾ ಹೋದರೆ ಅದೊಂದು ಮುಗಿಯದ ಕತೆಯಾಗುತ್ತದೆ.
ಅನುಪ್ರಭಾಕರ್ ಹುಟ್ಟುಹಬ್ಬ: ವಿಶೇಷ ಅಂದರೆ ಇಂದು ಅನುಪ್ರಭಾಕರ್ ಹುಟ್ಟುಹಬ್ಬವೂ ಹೌದು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹೃದಯ ಹೃದಯ ಚಿತ್ರದ ಮೂಲಕ ಬೆಳ್ಳಿತೆರೆಗೆ ಅಡಿಯಿಟ್ಟದ್ದರು. ಶಾಪ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟಿ ರಾಜ್ಯ ಪ್ರಶಸ್ತಿಗೂ ಪಾತ್ರರಾಗಿದ್ದಾರೆ.