Don't Miss!
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- News Mandya: ಏಪ್ರಿಲ್ 24 ರಿಂದ 26ರ ವರೆಗೆ ಮಂಡ್ಯದಲ್ಲಿ ಪ್ರತಿಬಂಧಕಾಜ್ಞೆ ಜಾರಿ
- Automobiles ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವಿಮುಕ್ತಿ' ಚಿತ್ರಪ್ರದರ್ಶನ ಮತ್ತು ಸಂವಾದ
ಬೆಂಗಳೂರಿನ ಬಸವನಗುಡಿಯ ಸೃಜನಶೀಲ ಚಟುವಟಿಕೆಗಳ ಕೇಂದ್ರ ಸೃಷ್ಟಿ ವೆಂಚರ್ಸ್. ಫೆಬ್ರವರಿ 14 ರಂದು ತನ್ನ ಸಮರ್ಪಕ ಸಿನೆಮಾ-ಸದಭಿರುಚಿಯ ಚಿತ್ರಪ್ರದರ್ಶನ ಸರಣಿ ಕಾರ್ಯಕ್ರಮದಡಿಯಲ್ಲಿ ಪಿ.ಶೇಷಾದ್ರಿಯವರ ರಾಷ್ಟ್ರಪ್ರಶಸ್ತಿ ವಿಜೇತ 'ವಿಮುಕ್ತಿ' ಚಿತ್ರದ ಪ್ರದರ್ಶನ ಹಾಗೂ ಸಂವಾದ ಕಾರ್ಯಕ್ರಮ ಏರ್ಪಡಿಸಿದೆ.
'ಸಮರ್ಪಕ ಸಿನೆಮಾ' ಇದು ಸೃಷ್ಟಿ ವೆಂಚರ್ಸ್ನ ಸದಭಿರುಚಿಯ ಮತ್ತು ಪ್ರಯೋಗಶೀಲ ಚಿತ್ರಗಳ ಪ್ರದರ್ಶನ ಹಾಗೂ ಸಂವಾದದ ಸರಣಿ ಕಾರ್ಯಕ್ರಮಗಳಲ್ಲಿ ಒಂದು. ಈ ಬಾರಿ ಅತ್ಯುತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿ ಗೆಲ್ಲುವ ಮೂಲಕ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಿದ ಪಿ.ಶೇಷಾದ್ರಿಯವರ 'ವಿಮುಕ್ತಿ' ಚಿತ್ರದ ಪ್ರದರ್ಶನ ಹಾಗೂ ಐದು ಬಾರಿ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರರಾದ ನಿರ್ದೇಶಕ ಪಿ.ಶೇಷಾದ್ರಿಯವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಿದೆ.
ಈ ಕಾರ್ಯಕ್ರಮದಲ್ಲಿ ನಿರ್ದೇಶಕ ಪಿ.ಶೇಷಾದ್ರಿ, ಹಿರಿಯ ನಟ ರಾಮಕ್ರಷ್ಣ , ಹಿರಿಯ ಚಿತ್ರವಿಮರ್ಶಕ ಕನ್ನಡಸಾಹಿತ್ಯ.ಕಾಂ ನ ಶೇಖರಪೂರ್ಣ, ಚಿತ್ರದ ಕಲಾವಿದರು ಹಾಗೂ ತಂತ್ರಜ್ಞ ರು ಭಾಗವಹಿಸಲಿದ್ದಾರೆ. ಭಾವನಾ, ರಾಮಕೃಷ್ಣ, ಹೋದಾ (ಇರಾನ್ ನಟಿ), ಬೇಬಿ ಸಾನಿಯಾ ಅಯ್ಯರ್ ಮುಖ್ಯ ತಾರಾಗಣದಲ್ಲಿರುವ ಈ ಚಿತ್ರಕ್ಕೆ ಎಸ್. ರಾಮಚಂದ್ರ ಛಾಯಾಗ್ರಹಣ, ಪ್ರವೀಣ್ ಗೋಡ್ಖಿಂಡಿ ಸಂಗೀತ ಹಾಗೂ ಕೆಂಪರಾಜ್ ಸಂಕಲನವಿದೆ.
ಗಂಡು-ಹೆಣ್ಣುಗಳ ನಡುವಿನ ಸಂಬಂಧದ ಸ್ವರೂಪ ತುಂಬಾ ನಾಜೂಕು ಹಾಗೂ ಸಂಕೀರ್ಣವಾದುದು. ಈ ಸಂಬಂಧದ ಸಂಕೀರ್ಣತೆಯನ್ನ ತೀರಾ ಭಿನ್ನ ನೆಲೆಯೊಂದರ ಮೂಲಕ ಕಂಡರಿಸುವ ಪ್ರಯತ್ನ 'ವಿಮುಕ್ತಿ' ಚಲನಚಿತ್ರದ್ದು. ತಾಯಿಯ ಪ್ರೀತಿಯಿಂದ ವಂಚಿತಳಾದ ಮಗಳೊಬ್ಬಳು, ತಂದೆಯ ಮೇಲೆ ಅತಿಯಾದ ವ್ಯಾಮೋಹ/ಅವಲಂಬನೆ ಇಟ್ಟುಕೊಂಡಿರುವ ಮಾನಸಿಕ ಅಸ್ಥಿಮಿತವೇ 'ಎಲೆಕ್ಟ್ರೋ ಕಾಂಪ್ಲೆಕ್ಸ್'. ಈ ಅಸಹಜ ಹಾಗೂ ಅತಿ ವರ್ತನೆಗಳು ಆಕೆಯ ಕೌಟುಂಬಿಕ ಸಂಬಂಧಗಳನ್ನು ಬಿಗಡಾಯಿಸುತ್ತಾ ಹೋಗುತ್ತವೆ...
ವಿವರಗಳಿಗೆ
:
ಸೃಷ್ಟಿ
ವೆಂಚರ್ಸ್,
ನಂ.81,
1
ನೇ
ಮಹಡಿ,
(ಪುಳಿಯೋಗರೆ
ಪಾಯಿಂಟ್
ಮೇಲೆ)
ಇಎಟಿ
ರಸ್ತೆ,
ಎನ್.ಆರ್.ಕಾಲೋನಿ,
ಬಸವನಗುಡಿ,
ಬೆಂಗಳೂರು-04.
ಮೊಬೈಲ್:
99004
39930,
94481
71069,
99863
72503