Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ: ನಟ ದರ್ಶನ್ ಬಂಧನ
ಈ ಮಧ್ಯೆ, ಸಕಲೇಶಪುರದಲ್ಲಿ ನಡೆಯುತ್ತಿದ್ದ ದರ್ಶನ್ ತಾರಾಗಣದ 'ಚಿಂಗಾರಿ' ಸಿನಿಮಾ ಚಿತ್ರೀಕರಣವನ್ನು ರದ್ದುಪಡಿಸಲಾಗಿದೆ.
ಕನ್ನಡದ ಖ್ಯಾತ ನಟ, ದಿವಂಗತ ತೂಗುದೀಪ ಶ್ರೀನಿವಾಸ್ ಅವರ ಪುತ್ರ ದರ್ಶನ್ ಅವರು ತಮ್ಮ ಪತ್ನಿಗೆ ಚಪ್ಪಲಿಯಿಂದ ಹೊಡೆದು ಗಾಯಗೊಳಿಸಿದ್ದಾರೆ. ಗಾಯಗೊಂಡಿರುವ ವಿಜಯಲಕ್ಷ್ಮಿಯನ್ನು ವಿಜಯನಗರದ ಗಾಯತ್ರಿ ನರ್ಸಿಂಗ್ ಹೋಂಗೆ ದಾಖಲಿಸಲಾಗಿದೆ.
ಏಳು ವರ್ಷದ ಸಂಸಾರ ನಡೆಸಿರುವ ದಂಪತಿ ಮಧ್ಯೆ ಕಳೆದ ಒಂದು ವರ್ಷದಿಂದ ವಿರಸ ನೆಲೆಸಿತ್ತು. ಇದಕ್ಕೆಲ್ಲ ಮೂಲ ಕಾರಣ ದರ್ಶನ್ ನಟಿ ನಿಖಿತಾ ಅವರೊಂದಿಗೆ ಅತಿ ಸ್ನೇಹ ಅತಿ ಸಲುಗೆ ಇಟ್ಟುಕೊಂಡಿರುವುದೇ ಆಗಿದೆ ಎಂದು ಗಾಂಧೀನಗರ ಹೇಳುತ್ತಿದೆ.
ದರ್ಶನ್ ರಾತ್ರಿ ಶೂಟಿಂಗ್ ಮುಗಿಸಿ ಮನೆಗೆ ಬಂದರು. ಆ ಸಮಯಕ್ಕೆ ರಾಜರಾಜೇಶ್ವರಿ ನಗರದಲ್ಲಿರುವ ಗಂಡನ ಮನೆಯಿಂದ ವಿಜಯನಗರದಲ್ಲಿರುವ ಸ್ನೇಹಿತೆ ವಿದ್ಯಾ ಮನೆಗೆ ವಿಜಯಲಕ್ಷ್ಮಿ ಬಂದಿದ್ದರು. ಆದರೆ ಅಲ್ಲಿಗೇ ತೆರಳಿದ ದರ್ಶನ್, ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಘಟನೆ ಕನ್ನಡ ಚಿತ್ರರಂಗ ಹಾಗು ದರ್ಶನ್ ಅಭಿಮಾನಿಗಳು ಮತ್ತು ಕರ್ನಾಟಕದ ಜನತೆಯನ್ನು ದಿಗ್ಭ್ರಮೆಗೆ ತಳ್ಳಿದ್ದು, ಮುಂದಿನ ಬೆಳವಣಿಗೆಗಳನ್ನು ಕಾತರದಿಂದ ನಿರೀಕ್ಷಿಸುತ್ತಿದ್ದಾರೆ. ವಿಜಯನಗರದಲ್ಲಿ ಕ್ಯಾಂಪ್ ಮಾಡಿರುವ ನಮ್ಮ ವರದಿಗಾರರು ಘಟನಾವಳಿಗಳನ್ನು ಕ್ಷಣಕ್ಷಣಕ್ಕೂ ನಿಮ್ಮ ಮುಂದಿಡಲಿದ್ದಾರೆ.