Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇದೀಗ ಕನ್ನಡದಲ್ಲಿ ವಿಕ್ರಮ್ ಮತ್ತು ಬೇತಾಳ...!?
ಬೆಂಗಳೂರು : ಕೆಲವು ವರ್ಷಗಳ ಹಿಂದೆ ದೂರದರ್ಶನದ ರಾಷ್ಟ್ರೀಯ ವಾಹಿನಿಯಲ್ಲಿ ಪ್ರಸಾರವಾಗಿ ಅಪಾರ ಜನಪ್ರಿಯತೆ ಗಳಿಸಿದ್ದ ವಿಕ್ರಮ್ ಔರ್ ಬೇತಾಳ್, ಇನ್ನು ಮುಂದೆ ಕನ್ನಡದಲ್ಲೂ ಪ್ರಸಾರವಾಗಲಿದೆ.
ಭಾರತಿ ಟೆಲಿಫಿಲ್ಮ್ಸ್ ಸಂಸ್ಥೆ ಈ ಧಾರಾವಾಹಿ ನಿರ್ಮಿಸುತ್ತಿದ್ದು, ಛಾಯಾಗ್ರಾಹಕ ಸಂತೋಷ್ಕುಮಾರ್ ನಿರ್ದೇಶಿಸುತ್ತಿದ್ದಾರೆ. ಒಟ್ಟು 52 ಕಂತುಗಳ ಈ ಧಾರಾವಾಹಿಗೆ ವಿಕ್ರಮ ಮತ್ತು ಬೇತಾಳನ ಕಥೆಗಳು ಎಂದು ಹೆಸರಿಡಲಾಗಿದೆ. ಬೇತಾಳನ ಪಾತ್ರವನ್ನು ಪಾಪ ಪಾಂಡು ಖ್ಯಾತಿಯ ಚಿದಾನಂದ ಮಾಡುತ್ತಿದ್ದು, ವಿಕ್ರಮಾದಿತ್ಯನ ಪಾತ್ರವನ್ನು ಪ್ರವೀಣ್ ಎಂಬುವರು ನಿಭಾಯಿಸಲಿದ್ದಾರೆ.
ಸಂತೋಷ್ಕುಮಾರ್ 24 ವರ್ಷಗಳಿಂದ ಛಾಯಾಗ್ರಹಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಮೂರು ಭಾಷೆಯ ಒಟ್ಟು 15 ಚಿತ್ರಗಳಿಗೆ ಸ್ವತಂತ್ರ ಛಾಯಾಗ್ರಾಹಕರಾಗಿ ದುಡಿದಿದ್ದಾರೆ. ಹಲವು ಧಾರಾವಾಹಿ ಮತ್ತು ಸಾಕ್ಷ್ಯ ಚಿತ್ರಗಳ ನಿರ್ಮಾಣದಲ್ಲಿ ಪಳಗಿರುವ ಅವರು 800ಕ್ಕೂ ಅಧಿಕ ಚಿತ್ರಗಳಿಗೆ ಸಹಾಯಕರಾಗಿ ಕೆಲಸ ಮಾಡಿದ್ದಾರೆ.
ಈ ಕಾರ್ಯಕ್ರಮ ಡಿಸೆಂಬರ್ 17ರಿಂದ ಪ್ರತಿ ಶನಿವಾರ ಮತ್ತು ಭಾನುವಾರಗಳಂದು, ಮಧ್ಯಾಹ್ನ 3.30 ರಿಂದ 4.00 ಗಂಟೆಯವರೆಗೆ ಡಿಡಿ 1ರಲ್ಲಿ ಪ್ರಸಾರವಾಗಲಿದೆ. ಹಿಂದಿಯಲ್ಲಿ ಪ್ರಸಾರವಾಗಿ ಮಕ್ಕಳು ಹಾಗೂ ಹಿರಿಯರ ಭಾರೀ ಪ್ರೀತಿ ಗಳಿಸಿದ್ದ ವಿಕ್ರಮ್ ಮತ್ತು ಬೇತಾಳನ ಕಥೆಗಳು, ಕನ್ನಡದ ಮಕ್ಕಳಲ್ಲಿ ರೋಮಾಂಚನ ಉಂಟು ಮಾಡಲು ತಯಾರಾಗಿವೆ.
ಕನ್ನಡ ಧಾರಾವಾಹಿಯಾಂದು ಮೊಟ್ಟಮೊದಲ ಬಾರಿಗೆ ಅಂತರಾಷ್ಟ್ರೀಯ ತಂತ್ರಜ್ಞಾನ ಬಳಸಿಕೊಂಡು ತಯಾರಾಗುತ್ತಿದೆ ಎಂದು ನಿರ್ದೇಶಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಿರ್ದೇಶಕ ಕುಮಾರ್ ಅವರ ಸಹೋದರರಾದ ಕುಶ, ಸಂತೋಷ್ ಮತ್ತು ಮೋಹನ್ ಇದರ ನಿರ್ಮಾಪಕರು.
(ಇನ್ಫೋ ವಾರ್ತೆ)
ಮುಖಪುಟ / ಸ್ಯಾಂಡಲ್ವುಡ್