Don't Miss!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಮನವಿಯಿಂದ 1 ಕೋಟಿ ಹಣ ಸಂಗ್ರಹ, ಯಾವ ಮೃಗಾಲಯದಲ್ಲಿ ಹೆಚ್ಚು?
ಕೊರೊನಾ ವೈರಸ್ನಿಂದ ಕರ್ನಾಟಕ ಮೃಗಾಲಯಗಳು ಹಾಗೂ ಪ್ರಾಣಿಗಳು ಸಂಕಷ್ಟನದಲ್ಲಿದೆ, ದಯವಿಟ್ಟು ದತ್ತು ಪಡೆಯುವುದರ ಮೂಲಕ ಸಹಾಯ ಮಾಡಿ ಎಂದು ನಟ ದರ್ಶನ್ ಐದು ದಿನಗಳ ಹಿಂದೆ ವಿನಂತಿಸಿದ್ದರು.
Recommended Video
ಡಿ ಬಾಸ್ ಮನವಿ ಪರಿಣಾಮ 91 ಲಕ್ಷ ಹಣ ಸಂಗ್ರಹವಾಗಿದೆ ಎಂದ ಕರ್ನಾಟಕ ಮೃಗಾಲಯ ಆಡಳಿತ ಮಂಡಳಿ ತಿಳಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಇಲಾಖೆ ''ಶ್ರೀ ದರ್ಶನ್ ತೂಗುದೀಪರ ಕರೆಗೆ ಓಗೊಟ್ಟು ಒಂದು ಕೋಟಿ ಸಮೀಪ ತಲುಪಿದ ಪ್ರಾಣಿ ಪ್ರಿಯರ ದತ್ತು ಮತ್ತು ದೇಣಿಗೆ ಮೊತ್ತ. ಎಲ್ಲಾ ದಾನಿಗಳಿಗೂ ಹಾಗೂ ದರ್ಶನ್ ರವರಿಗೆ ಅನಂತ ಧನ್ಯವಾದಗಳು'' ಎಂದಿದೆ.
ಮೃಗಾಲಯದ ನೆರವಿಗೆ ನಿಂತ ದರ್ಶನ್ಗೆ ಧನ್ಯವಾದ ತಿಳಿಸಿದ ಅರವಿಂದ್ ಲಿಂಬಾವಳಿ
ಅಂದ್ಹಾಗೆ, ಜೂನ್ 5 ರಂದು ದರ್ಶನ್ ಮನವಿ ಮಾಡಿದ್ದರು. ಜೂನ್ 9 ರವರೆಗಿನ ಅವಧಿಯಲ್ಲಿ ಒಟ್ಟು ಏಂಟು ಮೃಗಾಲಯಗಳಲ್ಲಿ 91 ಲಕ್ಷದ 61 ಸಾವಿರ ರೂಪಾಯಿ ದತ್ತು ಹಣ ಸಂಗ್ರಹವಾಗಿದೆ.
ಮೈಸೂರು ಮೃಗಾಲಯವೊಂದರಲ್ಲೇ 47.5 ಲಕ್ಷ ಹಣ ಸಂಗ್ರಹವಾಗಿದೆ. ಬೆಂಗಳೂರಿನ ಬನ್ನೇರುಘಟ್ಟದಲ್ಲಿ 26 ಲಕ್ಷ ಹಾಗೂ ಶಿವಮೊಗ್ಗದಲ್ಲಿ 6.9 ಲಕ್ಷ ಹಣ ದೇಣಿಗೆ ಬಂದಿದೆ. ಇದುವರೆಗೂ ಒಟ್ಟು 3548 ಮಂದಿ ಮೃಗಾಲಯಗಳಿಂದ ಪ್ರಾಣಿ-ಪಕ್ಷಿಗಳನ್ನು ದತ್ತು ಪಡೆದಿದ್ದಾರೆ.
ರಾಬರ್ಟ್ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚಾಮುಂಡಿ ಹೆಸರಿನ ಆನೆ ಮರಿ ದತ್ತು ಪಡೆದಿದ್ದಾರೆ. ಈ ವಿಷಯವನ್ನು ದರ್ಶನ್ ಟ್ವಿಟ್ಟರ್ನಲ್ಲಿ ತಿಳಿಸಿ ನಿರ್ಮಾಪಕರಿಗೆ ಧನ್ಯವಾದ ಹೇಳಿದರು.
ಕಿರುತೆರೆ ನಟಿ ಕಾವ್ಯ ವೆಂಕಟೇಶ್ ಬಿಳಿ ನವಿಲು ದತ್ತು ಪಡೆದು ಸಂತಸ ಹಂಚಿಕೊಂಡಿದ್ದರು. ''ಕೋವಿಡ್ ಮಹಾಮಾರಿಯಿಂದ ಮಾನವಕುಲಕ್ಕೆ ಎಷ್ಟು ತೊಂದರೆ ಆಗಿದೆಯೋ ಅಷ್ಟೇ ತೊಂದರೆ ಪ್ರಾಣಿಸಂಕುಲಕ್ಕೂ ಆಗಿದೆ. ಅದರಿಂದ ಹಂಪಿ ಕ್ಷೇತ್ರದ "ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್"ನ ಬಿಳಿ ನವಿಲನ್ನು ದತ್ತು ಪಡೆದಿದ್ದೇನೆ.
ಯಾಕೆಂದರೆ ನಾನು ಚಿಕ್ಕಂದಿನಲ್ಲಿ ತುಂಬಾ ಇಷ್ಟ ಪಡುತ್ತಿದು ಪಕ್ಷಿ ನವಿಲು ಮತ್ತು ಇದು ನಮ್ಮ ರಾಷ್ಟ್ರೀಯ ಪಕ್ಷಿ ಅದರಿಂದ ನನಗೆ ಬಹಳ ಖುಷಿ ತಂದುಕೊಟ್ಟಿದೆ ಹಾಗೂ ಈ ನನ್ನ ಕೆಲಸಕ್ಕೆ ಮುಖ್ಯ ಕಾರಣಕರ್ತರು ಕನ್ನಡ ಚಲನಚಿತ್ರದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (sir ) ಅವರಿಗೂ ಕೂಡ ತುಂಬು ಹೃದಯದ ಧನ್ಯವಾದಗಳು ಎಂದು ಇನ್ಸ್ಟಾದಲ್ಲಿ ಪೋಸ್ಟ್ ಹಾಕಿದ್ದಾರೆ.