Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಂಗಾರಿಯಾದ ಲೂಸ್ ಮಾದ ಅಲಿಯಾಸ್ ಯೋಗೇಶ್
ಸಿದ್ಲಿಂಗು ಚಿತ್ರದ ಬಳಿಕ ಲೂಸ್ ಮಾದ ಅಲಿಯಾಸ್ ಯೋಗೇಶ್ ಮತ್ತೊಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ. ಈ ಚಿತ್ರಕ್ಕೆ ಬಂಗಾರಿ ಎಂದು ಹೆಸರಿಡಲಾಗಿದೆ. ಚಿತ್ರದ ನಾಯಕಿ ರಾಗಿಣಿ ದ್ವಿವೇದಿ. ಮಾ.ಚಂದ್ರು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಇತ್ತೀಚೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆರಂಭ ಫಲಕ ತೋರುವ ಮೂಲಕ ಚಾಲನೆ ನೀಡಿದರು.
ದಯಾಳ್ ಪದ್ಮನಾಭನ್ ಜೊತೆ ಕೆಲಸ ಮಾಡಿರುವ ಅನುಭವ ಮಾ.ಚಂದ್ರು ಅವರಿಗಿದೆ. ಕತೆ, ಚಿತ್ರಕತೆ ಕೂಡ ಅವರದೆ. ಮೂರು ವರ್ಷಗಳ ಹಿಂದೆಯೇ ಚಿತ್ರಕತೆ ಸಿದ್ಧ ಮಾಡಿಕೊಂಡಿದ್ದರಂತೆ. ಕಾಲಕಾಲಕ್ಕೆ ಅದನ್ನು ಬದಲಾಯಿಸಿದ್ದೇನೆ. ಒಟ್ಟು 65 ದಿನಗಳ ಕಾಲ ಚಿತ್ರೀಕರಣ ನಡೆಯಲಿದ್ದು ಬಹುತೇಕ ಶೂಟಿಂಗ್ ಕೋಲಾರದಲ್ಲಿ ನಡೆಯಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.
ತಮಿಳು ನಟ ದಂಡಪಾಣಿ ಚಿತ್ರದಲ್ಲಿ ವಿಶೇಷ ಪಾತ್ರವನ್ನು ಪೋಷಿಸುತ್ತಿದ್ದಾರೆ. ಚಿತ್ರದ ನಿರ್ಮಾಪಕರು ಎಲ್ಲಪ್ಪ. ನಿರಂಜನ್ ಬಾಬು ಅವರ ಛಾಯಾಗ್ರಹಣ ಹಾಗೂ ನೀಲ್ ಅವರ ಸಂಗೀತ ಚಿತ್ರಕ್ಕಿದೆ. ಬಂಗಾರಿ ಪಾತ್ರ ನನಗೆ ಹೊಸದು. ಹೀರೋ ಪ್ರಧಾನ ಪಾತ್ರ. ಒಬ್ಬ ಮುಗ್ಧ ಹಳ್ಳಿ ಹುಡುಗನಾಗಿ ಚಿತ್ರದಲ್ಲಿ ಕಾಣಿಸಲಿದ್ದೇನೆ ಎಂದಿದ್ದಾರೆ ಯೋಗೇಶ್. (ಏಜೆನ್ಸೀಸ್)