Don't Miss!
- News ಬೆಂಗಳೂರಲ್ಲಿ ನಿತ್ಯ 10 mld ಸಂಸ್ಕರಿಸಿದ ನೀರು ಪೂರೈಕೆ: BWSSB
- Sports Rishabh Pant: ಟಿ20 ವಿಶ್ವಕಪ್ಗೆ ರಿಷಭ್ ಪಂತ್ ಭಾರತ ತಂಡದಲ್ಲಿರಬೇಕು
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರನಟಿ ಅಮೂಲ್ಯಾಗೆ ಕೊಲೆ ಬೆದರಿಕೆ
'ಚೆಲುವಿನ ಚಿತ್ತಾರ'ದ ಬೆಡಗಿ ಅಮೂಲ್ಯರಿಗೆ ದೂರವಾಣಿ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ. ಆಟೋಗ್ರಾಫ್ ಪಡೆಯುವ ನೆಪದಲ್ಲಿ ಆಯುಧದಿಂದ ಚುಚ್ಚಿ ಕೊಲೆ ಮಾಡುತ್ತೇನೆ ಎಂದು ಅಪರಿಚಿತ ವ್ಯಕ್ತಿಯೊಬ್ಬ ನಟಿ ಅಮೂಲ್ಯರಿಗೆ ದೂರವಾಣಿ ಮೂಲಕ ಕೊಲೆ ಬೆದರಿಕೆ ಒಡ್ಡಿದ್ದಾನೆ. ಈ ಸಂಬಂಧ ವೈಯಾಲಿ ಕಾವಲ್ ಪೊಲೀಸ್ ಠಾಣೆಯಲ್ಲಿ ಅಮೂಲ್ಯ ದೂರು ದಾಖಲಿಸಿದ್ದಾರೆ.
ಕೇವಲ ಅಮೂಲ್ಯರಿಗಷ್ಟೇ ಅಲ್ಲದೆ ಅವರ ಅಣ್ಣ ಕೆ ದೀಪಕ್ ಅವರಿಗೂ ಪ್ರಾಣ ಬೆದರಿಕೆ ಹಾಕಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಅವರನ್ನು ಭೇಟಿ ಮಾಡಿದ ಅಮೂಲ್ಯ ಹಾಗೂ ದೀಪಕ್ ವಿಷಯವನ್ನು ತಿಳಿಸಿದ್ದಾರೆ. ಆದಷ್ಟು ಬೇಗ ತನಿಖೆ ನಡೆಸಿ ಕೊಲೆ ಬೆದರಿಕೆ ಒಡ್ಡಿರುವ ಕಿಡಿಗೇಡಿಯನ್ನು ಬಂಧಿಸುವಂತೆ ವೈಯಾಲಿ ಕಾವಲ್ ಪೊಲೀಸ್ ಠಾಣೆಗೆ ಬಿದರಿ ಆದೇಶಿಸಿದ್ದಾರೆ.
ನವೆಂಬರ್ 9ರ ಮುಂಜಾನೆ ಅಮೂಲ್ಯ ಹಾಗೂ ದೀಪಕ್ ಅವರ ಹೆಸರುಗಳನ್ನು ತೆಂಗಿನ ಚಿಪ್ಪು, ಕಲ್ಲು ಮತ್ತು ಇಟ್ಟಿಗೆಗಳ ಮೇಲೆ ಬರೆದು ಅವರ ಮನೆಯ ಬಳಿ ಹಾಕಲಾಗಿತ್ತು. ಇದನ್ನು ಕಂಡ ಅಮೂಲ್ಯ ಅವರ ತಂದೆ ಯಾರೋ ಹುಚ್ಚು ಅಭಿಮಾನಿಗಳು ಈ ರೀತಿ ಮಾಡಿರಬೇಕು ಎಂದು ಸುಮ್ಮನಾದರು.
ಆದರೆ ಡಿಸೆಂಬರ್ 6ರಂದು ಬಂದ ದೂರವಾಣಿ ಕರೆಯಲ್ಲಿ ಜಯರಾಂ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬ ಕೊಲೆ ಬೆದರಿಕೆ ಹಾಕಿದ್ದಾನೆ. ಸ್ವತಃ ದೀಪಕ್ ದೂರವಾಣಿ ಕರೆಯನ್ನು ಸ್ವೀಕರಿಸಿದ್ದರು. ನವೆಂಬರ್ 9ರಂದು ನಡೆದ ಘಟನೆಯನ್ನು ಜಯರಾಂನ ಗೆಳೆಯ ಬ್ರಹ್ಮ ಮಾಡಿದ್ದಾನೆ ಎಂದು ತಿಳಿಸಿದ್ದ.
ಮಲ್ಲೇಶ್ವರಂನ ಕೃಷ್ಣಪ್ಪ ಬ್ಲಾಕ್ ನಲ್ಲಿರುವ ಅಮೂಲ್ಯರ ಮನೆಯ ಟೆರೇಶ್ ಮೇಲೆ ಕಳೆದ ನವೆಂಬರ್ 9ರಂದು ಆಕೆಯ ಫೋಟೋ ಇಟ್ಟು ಸಿಗರೇಟು ತುಂಡುಗಳನ್ನು ಬಿಸಾಡಿದ ಘಟನೆಯೂ ನಡೆದಿತ್ತು. ಇತ್ತೀಚೆಗೆ ದೀಪಕ್ ರ ಮೊಬೈಲ್ ಗೆ ಕರೆ ಮಾಡಿದ ವ್ಯಕ್ತಿ ಮಹಡಿ ಮೇಲೆ ನಡೆದಿದ್ದ ಘಟನೆಯನ್ನು ಪ್ರಸ್ತಾಪಿಸಿ ಇದು ತನ್ನ ಸ್ನೇಹಿತನ ಕೆಲಸವಾಗಿದೆ. ಬ್ರಹ್ಮ ಎಂಬ ಈತ ಸೈಕೋಪಾತ್ ಆಗಿದ್ದಾನೆ ಎಂದು ಹೇಳಿದ್ದ.
ಅಮೂಲ್ಯರನ್ನು ಕಾಲೇಜಿನ ಬಳಿಯೆ ಕೊಲ್ಲುವುದಾಗಿ ನಂತರ ನಾಲ್ಕು ಕರೆಗಳು ದೀಪಕ್ ಗೆ ಬಂದಿವೆ. ವಿವಿಧ ಕಾಯಿನ್ ಬಾಕ್ಸ್ ಗಳಿಂದ ಕರೆ ಮಾಡಿ ತಮ್ಮನ್ನು ಹಾಗೂ ಸಹೋದರಿ ಅಮೂಲ್ಯರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ದೀಪಕ್ ದೂರಿನಲ್ಲಿ ತಿಳಿಸಿದ್ದಾರೆ. ಸದ್ಯಕ್ಕೆ ಪ್ರಕಾಶ್ ರೈ ಅವರ 'ನಾನು ನನ್ನ ಕನಸು' ಚಿತ್ರದಲ್ಲಿ ಅಮೂಲ್ಯ ತೊಡಗಿಕೊಂಡಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)