Don't Miss!
- News ಮಹಾರಾಜರು ಬೆಂಗಳೂರು ಅರಮನೆ ಮೈದಾನ ಜಾಗ ಬಿಟ್ಟು ಕೊಡುವಂತೆ ಎಎಪಿ ಆಗ್ರಹ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿಡಿಸಿದ ಹೊಸ ಬಾಂಬ್
ಮಾಧ್ಯಮದಲ್ಲಿ ಬಂದಂತೆ ನಾನು ಹೆಂಡತಿ, ಮಗನಿಗೆ ಸಿಗರೇಟ್ ನಿಂದ ಸುಟ್ಟಿರುವುದಾಗಲಿ ಅಥವಾ ಯಾವುದೇ ಚಿತ್ರಹಿಂಸೆ ನೀಡಿಲ್ಲ. ಇದು ಸತ್ಯ. ನಾನೇನೂ ಅಷ್ಟು ಕಟುಕನಲ್ಲ. ಇನ್ನು ಒಂದು ತಿಂಗಳಲ್ಲಿ ಎಲ್ಲಾ ವಿಷಯವನ್ನು ಜಗತ್ತಿಗೆ ಸಾರುವಂತೆ ಬಹಿರಂಗ ಪಡಿಸುತ್ತೇನೆ ಚಾಲೆಂಜಿಂಗ್ ಸ್ಟಾರ್ "ಚಾಲೆಂಜ್' ಮಾಡಿದ್ದಾರೆ.
ನಾನು ಮತ್ತು ನನ್ನ ಪತ್ನಿ ವಿಜಯಲಕ್ಷ್ಮಿ ಹಿಂದಿಗೂ ಇಂದಿಗೂ ಅನ್ಯೋನ್ಯವಾಗಿಯೇ ಇದ್ದೇವೆ. ನಮ್ಮ ನಡುವೆ ಹುಳಿ ಹಿಂಡುವ ಕೆಲಸ ಮಾಡಿದ್ದಾರಲ್ಲಾ ಅವರ ಜಾತಕವನ್ನು ಅಭಿಮಾನಿಗಳ ಮುಂದೆ ಬಹಿರಂಗ ಪಡಿಸುತ್ತೇನೆ. ಖಳ ನಟನ ಮಗನೊಬ್ಬ ನಾಯಕನಾಗುವುದು ನಮ್ಮ ಚಿತ್ರರಂಗದಲ್ಲಿ ಕೆಲವರಿಗೆ ಇಷ್ಟವಿಲ್ಲ.
ನಾಯಕನ ಮಕ್ಕಳು ಮಾತ್ರ ನಾಯಕನಾಗಬೇಕೆಂದು ರೂಲ್ಸ್ ಏನಾದರೂ ಇದೆಯಾ? ಚಿತ್ರೋದ್ಯಮದಲ್ಲಿ ನನ್ನನ್ನು ಎದುರಾಳಿ ಎಂದು ಭಾವಿಸಿರುವ ಕೆಲವರು ನನ್ನ ವಿರುದ್ದ ನಡೆಸಿದ ಸಂಚನ್ನು ಹೊರ ಹಾಕುತ್ತೇನೆ ಎಂದು ದರ್ಶನ್ ತೂಗುದೀಪ್ ನೀಡಿರುವ ಹೇಳಿಕೆ ಗಾಂಧಿನಗರದಲ್ಲಿ ಹೊಸ ಸಂಚಲನ ಮೂಡಿಸಿದೆ.
ದಾಂಪತ್ಯ ಜೀವನ ಎಂದ ಮೇಲೆ ಸಣ್ಣಪುಟ್ಟ ಸಮಸ್ಯೆಗಳು ಸಾಮಾನ್ಯ. ಅದನ್ನು ಯಾರು ಹೇಗೆ ದುರುಪಯೋಗ ಪಡಿಸಿಕೊಂಡರು, ನನ್ನ ಹೆಂಡತಿಗೆ ಬೇಡವಾದ ಕಿವಿಮಾತು ಹೇಳಿಕೊಟ್ಟರು ಎಲ್ಲವನ್ನೂ ಸವಿವರವಾಗಿ ತಿಳಿಸುತ್ತೇನೆ. ಇಷ್ಟು ದೊಡ್ಡ ಪರಿಣಾಮ ಎದುರಿಸ ಬೇಕಾಗಬಹುದು ಎಂದು ಅರಿಯದ ನನ್ನ ಹೆಂಡತಿ ಅವರು ಹೇಳಿದಂತೆ ನಡೆದು ಕೊಂಡಳು ಎಂದು ಹೇಳಿಕೆ ನೀಡಿದ್ದಾರೆ.
ದರ್ಶನ್ ನೀಡಿರುವ ಈ ಹೇಳಿಕೆ ಭಾರೀ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.