Don't Miss!
- News ಅತ್ಯಾಚಾರ ಪ್ರಕರಣ: ಇಬ್ಬರು ಆರೋಪಿಗಳಿಗೆ 20 ವರ್ಷ ಕಠಿಣ ಶಿಕ್ಷೆ, 55,000 ರೂಪಾಯಿ ದಂಡ
- Automobiles ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- Lifestyle ರಸ್ತೆ ಬದಿಯ ಮರಗಳಿಗೆ ಬಣ್ಣ ಏಕೆ ಬಳಿದಿರುತ್ತಾರೆ..? ಕೆವಿನ್ ಪೀಟರ್ಸನ್ಗೆ ಈ ಪ್ರಶ್ನೆ ಕಾಡಿದ್ದೇಕೆ..?
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿರಿಯ ನಿರ್ದೇಶಕ ರಾಜ್ ಕಿಶೋರ್ ನಿಧನ
ಕನ್ನಡ ಚಿತ್ರರಂಗ ಹಿರಿಯ ನಿರ್ದೇಶಕ ರಾಜ್ ಕಿಶೋರ್(53) ಹೃದಯಾಘಾತದಿಂದ ಮಹಾರಾಷ್ಟ್ರದ ಶಿರಡಿಯಲ್ಲಿ ಬುಧವಾರ ನಿಧನರಾದರು. ರಾಜ್ ಕಿಶೋರ್ ಅವರು ಮೂರು ದಶಕಗಳಿಗೂ ಅಧಿಕ ಕಾಲ ಕನ್ನಡ ಚಿತ್ರರಂಗದೊಂದಿಗೆ ಒಡನಾಟ ಹೊಂದಿದ್ದರು. ಅವರಿಗೆ ಪತ್ನಿ ಮೂವರು ಪುತ್ರಿಯರಿದ್ದಾರೆ. ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನ ಕಲ್ಯಾಣ ನಗರದ ಅವರ ಮನೆಯಲ್ಲಿ ಇಡಲಾಗಿದೆ. ಗುರುವಾರ ಸಂಜೆಗೆ ಅಂತ್ಯ ಕ್ರಿಯೆಯನ್ನು ನೆರೆವೇರಿಸಲಾಗುವುದು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
ರಾಜ್ ಕಿಶೋರ್ 20ಕ್ಕೂ ಅಧಿಕ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಪ್ರಭಾಕರ್, ಜಗ್ಗೇಶ್, ವಿಷ್ಣುವರ್ಧನ್, ಅಂಬರೀಶ್ ಸೇರಿದಂತೆ ಹಲವಾರು ನಟರ ಚಿತ್ರಗಳನ್ನು ನಿರ್ದೇಶಿಸಿದ್ದರು. ರಾಜೇಂದ್ರಸಿಂಗ್ ಬಾಬು ಅವರ ಸಹಾಯಕರಾಗಿ ಚಿತ್ರರಂಗ ಪ್ರವೇಶಿಸಿದ ರಾಜ್ ಕಿಶೋರ್ ನಂತರದ ದಿನಗಳಲ್ಲಿ ದ್ವಾರಕೀಶ್ ಚಿತ್ರ ನಿರ್ಮಾಣದಲ್ಲಿ ಸಹಾಯಕ ನಿರ್ದೇಶಕರಾಗಿದ್ದರು. 'ನೀ ಬರೆದ ಕಾದಂಬರಿ'ಯಿಂದ 'ಆಪ್ತಮಿತ್ರ' ಚಿತ್ರದವರೆಗೂ ದ್ವಾರಕೀಶ್ ಅವರ ಸಹಾಯಕರಾಗಿಯೇ ದುಡಿದರು.
ವಿಷ್ಣುವರ್ಧನ್ ಹಾಗೂ ನಳಿನಿ ಅಭಿನಯದ 'ಆಸೆಯ ಬಲೆ' ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ರಾಜ್ ಕಿಶೋರ್ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗಿದ್ದರು. ಜೀವನ ಜ್ಯೋತಿ, ಭಂಡ ನನ್ನ ಗಂಡ, ಅವತಾರ ಪುರುಷ, ತಾಯಿಯ ಆಸೆ, ಭೂಮಿ ತಾಯಾಣೆ, ರಾಜ ಯುವರಾಜ, ತ್ರಿನೇತ್ರ, ಶಬರಿಮಲೆ ಸ್ವಾಮಿ ಅಯ್ಯಪ್ಪ, ಛಾಲೆಂಜ್, ಹೊಸ ಲವ್ ಸ್ಟೋರಿ, ನೀಲ ಮೇಘ ಶಾಮ, ಬೇಡ ಕೃಷ್ಣ ರಂಗಿನಾಟ, ಭೈರವ ರೆಬಲ್ ಸ್ಟಾರ್ ಅಂಬರೀಶ್ ಅವರ ತಾಯಿಗೊಬ್ಬ ಕರ್ಣ, ಪುಗಸಟ್ಟೆ ಗಂಡ ಹೊಟ್ಟೆ ತುಂಬ ಉಂಡ ಸೇರಿದಂತೆ ಹಲವಾರು ಚಿತ್ರಗಳು ರಾಜ್ ಕಿಶೋರ್ ನಿರ್ದೇಶನದಲ್ಲಿ ಹೊರಬಂದಿವೆ. ಅವರ ಕೊನೆಯ ಚಿತ್ರ 'ಸಿರಿಚಂದನ'. ನಟಿ ರಾಧಿಕ ಅವರನ್ನು ನೀಲ ಮೇಘ ಶಾಮ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ್ದು ರಾಜ್ ಕಿಶೋರ್.
(ದಟ್ಸ್ಕನ್ನಡ ಸಿನಿವಾರ್ತೆ)