Don't Miss!
- Automobiles ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- News Zero Shadow Day: ನಾಳೆ ಬುಧವಾರ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ; ಸಮಯ, ವಿವರ
- Sports David Warner: ಊಟನೂ ಬೇಡ, ಹುಡುಗಿನೂ ಬೇಡ; ಆಧಾರ್ ಕಾರ್ಡ್ ಬೇಕೆಂದ ಡೇವಿಡ್ ವಾರ್ನರ್!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಾಡಿಗೆ ಅಣಿಯಾದ ಮಳೆಯಲಿ ಜೊತೆಯಲಿ
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದಲ್ಲಿ ಮೂಡಿ ಬರುತ್ತಿರುವ 'ಮಳೆಯಲಿ ಜೊತೆಯಲಿ' ಚಿತ್ರಕ್ಕೆ ಸಕಲೇಶಪುರ ಹಾಗೂ ಮೈಸೂರು ನಗರಗಳಲ್ಲಿ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ ಎಂದು ನಿರ್ಮಾಪಕಿ ಶಿಲ್ಪಾಗಣೇಶ್ ತಿಳಿಸಿದ್ದಾರೆ. ಈ ತಿಂಗಳ 16ರಂದು ಬೆಂಗಳೂರು ನಗರದಲ್ಲಿ ಹಾಡಿನ ಚಿತ್ರೀಕರಣಕ್ಕೆ ಚಾಲನೆ ದೊರಕಲಿದೆ.
ನಟನೆಗೆ ಮೀಸಲಾಗಿದ್ದ ನಾಯಕ ಗಣೇಶ್ ಈ ಚಿತ್ರದ ಗೀತೆಯೊಂದಕ್ಕೆ ಧ್ವನಿ ನೀಡುವುದರೊಂದಿಗೆ ಗಾಯಕನಾಗೂ ಪರಿಚಯವಾಗುತ್ತಿದ್ದಾರೆ. ರಮಣೀಯ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಿರುವ ನಿರ್ದೇಶಕ ಪ್ರೀತಂಗುಬ್ಬಿ, ಮಾತಿನ ಭಾಗದ ಚಿತ್ರೀಕರಣ ಕಲಾವಿದ ಹಾಗೂ ತಂತ್ರಜ್ಞರ ಸಹಕಾರದಿಂದ ನಿಗದಿತ ಯೋಜನೆಯಂತೆ ಪೂರ್ಣವಾಗಿದೆ ಎಂದಿದ್ದಾರೆ.
ಗೋಲ್ಡನ್ ಮೂವೀಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಕೃಷ್ಣ ಛಾಯಾಗ್ರಹಣ, ವಿ.ಹರಿಕೃಷ್ಣ ಸಂಗೀತ, ದೀಪು ಎಸ್ ಕುಮಾರ್ ಸಂಕಲನ, ದೇವಶೆಟ್ಟಿ ಮಹೇಶ್ ಸಂಭಾಷಣೆ, ಕವಿರಾಜ್, ಜಯಂತ್ ಕಾಯ್ಕಿಣಿ ಗೀತರಚನೆ ಹಾಗೂ ಮೋಹನ್ ಕಲಾ ನಿರ್ದೇಶನವಿರುವ ಚಿತ್ರದ ತಾರಾಬಳಗದಲ್ಲಿ ಗಣೇಶ್, ಅಂಜನಾ ಸುಖಾನಿ, ಯುವಿಕಾ ಚೌಧರಿ, ಸಿಹಿಕಹಿಚಂದ್ರು, ಸಿಹಿಕಹಿಗೀತಾ, ರಂಗಾಯಣ ರಘು, ಶರಣ್, ದತ್ತಣ್ಣ ಮುಂತಾದವರಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)