Just In
Don't Miss!
- News
ಹಲ್ವಾ ಸಮಾರಂಭದೊಂದಿಗೆ ಅಂತಿಮ ಹಂತದಲ್ಲಿ ಬಜೆಟ್ 2021
- Finance
ಬಜೆಟ್ 2021: ಐ.ಟಿ. ಫೈಲಿಂಗ್ ನಲ್ಲಿ PAN ಕಾರ್ಡ್ ಗೆ ಏಕಿಷ್ಟು ಮಹತ್ವ, ಏನಿದರ ವಿಶೇಷ?
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸಂಗಕ್ಕರ ಬಲ
- Automobiles
ಕರೋಕ್ ಎಸ್ಯುವಿಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಿದೆ ಸ್ಕೋಡಾ
- Lifestyle
ವಾರ ಭವಿಷ್ಯ: 12 ರಾಶಿಗಳ ರಾಶಿ ಫಲ ಹೇಗಿದೆ ನೋಡಿ
- Education
NIT Recruitment 2021: ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬೆಂಗಳೂರಿನಲ್ಲಿ ಗಿರೀಶ್ ಕಾಸರವಳ್ಳಿ ಚಲನಚಿತ್ರೋತ್ಸವ
ಈ ಚಲನಚಿತ್ರೋತ್ಸವವು ಶುಕ್ರವಾರ(ಜೂ.10) ರಿಂದ ಗುರುವಾರ (ಜೂ.16)ರವರೆಗೆ ನಡೆಯಲಿದೆ. ಸ್ಥಳ: ಕೆ ವಿ ಸುಬ್ಬಣ್ಣ ಆಪ್ತ ರಂಗಮಂದಿರ, 151, 7ನೇ ಅಡ್ಡ ರಸ್ತೆ, ಟೀಚರ್ಸ್ ಕಾಲೋನಿ, 1ನೇ ಹಂತ, ದಯಾನಂದ ಸಾಗರ್ ಕಾಲೇಜು ಬಳಿ, ವಸುಧಾ ಭವನದ ಎದುರು, ಬೆಂಗಳೂರು-78. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 92425 23523.
ಕರ್ನಾಟಕ ಸಾಹಿತ್ಯ ಅಕಾಡೆಮಿ, ಸುಚಿತ್ರಾ ಫಿಲಂ ಸೊಸೈಟಿ ಹಾಗೂ ಕೆ ವಿ ಸುಬ್ಬಣ್ಣ ಆಪ್ತ ಸಮೂಹ ಸಹ ಭಾಗಿತ್ವದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಎರಡು ದಿನಗಳ ಕಾಲ ಡಾ.ಗಿರೀಶ್ ಕಾಸರವಳ್ಳಿ ಅವರ ಚಿತ್ರಗಳ ಕುರಿತು ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆ. ವಿಚಾರ ಸಂಕಿರಣದ ಭಾಗವಾಗಿ ಕಾಸರವಳ್ಳಿ ಚಿತ್ರಗಳ ಪ್ರದರ್ಶನ, ಸಂವಾದ, ವಿಮರ್ಶೆ ಕೂಡ ನಡೆಯಲಿದೆ.
ಸುಚಿತ್ರಾ ಫಿಲಂ ಸೊಸೈಟಿಯಲ್ಲಿ(ಬನಶಂಕರಿ, ಬೆಂಗಳೂರು) ಜೂ.18 ಮತ್ತು 19ರಂದು ವಿಚಾರ ಸಂಕಿರಣ ನಡೆಯಲಿದೆ. ಕಾರ್ಯಕ್ರಮವನ್ನು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್.ಅನಂತಮೂರ್ತಿ ಉದ್ಘಾಟಿಸಲಿದ್ದಾರೆ. ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಟಿ ಎಸ್ ನಾಗಾಭರಣ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.
ಎನ್ ವಿದ್ಯಾಶಂಕರ್ ಅವರಿಂದ "ಕರ್ನಾಟಕ ಸಾಂಸ್ಕೃತಿಕ ರಾಜಕೀಯ : ಕಾಸರವಳ್ಳಿ ಅವರ ಚಿತ್ರಗಳ ತಾತ್ವಿಕ ಅನುಸಂಧಾನ" ವಿಚಾರ ಸಂಕಿರಣದ ಮೊದಲ ಗೋಷ್ಠಿ. ಕಾಸರವಳ್ಳಿ ಅವರ ಚಲನಚಿತ್ರಗಳ ಮಾರ್ಗ ಕುರಿತು ಮಾತನಾಡಲಿದ್ದಾರೆ ಕೆ ವಿ ಅಕ್ಷರಾ. ಕಾಸರವಳ್ಳಿ ನಿರ್ದೇಶನದ ಕೆ ಕೆ ಹೆಬ್ಬಾರ್ ಅವರ ಸಾಕ್ಷ್ಯಚಿತ್ರದ ಬಗ್ಗೆ ಮಾತನಾಡಲಿದ್ದಾರೆ ಅನಿಲ್ ಕುಮಾರ್.
ಗುಲಾಬಿ ಟಾಕೀಸ್ ಪುಸ್ತಕವನ್ನು ಅನಾವರಣಗೊಳಿಸಲಿದ್ದಾರೆ ಡಾ.ಯು.ಆರ್.ಅನಂತಮೂರ್ತಿ. ಕಾರ್ಯಕ್ರಮದಲ್ಲಿ ಪ್ರೊ.ಎಂ ಎಚ್ ಕೃಷ್ಣಯ್ಯ, ಡಾ.ಅನಂತಮೂರ್ತಿ, ಪ್ರೊ ಟಿ ಪಿ ಅಶೋಕ್, ಕೆ ವಿ ಅಕ್ಷರಾ, ಮನು ಚಕ್ರವರ್ತಿಹಾಗೂ ಬಿಎಸ್ ಲಿಂಗದೇವರು ಭಾಗವಹಿಸಲಿದ್ದಾರೆ. (ದಟ್ಸ್ಕನ್ನಡ ಸಿನಿವಾರ್ತೆ)