Don't Miss!
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- News ಮತ ಹಾಕದಿದ್ದರೆ ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ. ಮಲ್ಲಿಕಾರ್ಜುನ್ ಖರ್ಗೆ ಭಾವನಾತ್ಮಕ ಮಾತು
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆಲುಗು ಊಸರವಳ್ಳಿ ದಾಳಿಗೆ ಜೋಗಯ್ಯ ಧೂಳಿಪಟ
ಮೂಲಗಳ ಪ್ರಕಾರ, ಮಹೇಶ್ ಬಾಬು ಅಭಿನಯದ 'ದೂಕುಡು' ಹಾಗೂ ಜೂ.ಎನ್ಟಿಆರ್ ಅಭಿನಯದ 'ಊಸರವಳ್ಳಿ' ಚಿತ್ರಗಳು ರಾಜ್ಯದಾದ್ಯಂತ 65ಕ್ಕೂ ಅಧಿಕ ಚಿತ್ರಮಂದಿರಗಳಿಗೆ ಲಗ್ಗೆ ಹಾಕಿವೆ. ಆದರೆ ಕೆಎಫ್ಸಿಸಿ ನಿಯಮಗಳ ಪ್ರಕಾರ ಪರಭಾಷಾ ಚಿತ್ರಗಳು 24ಕ್ಕೂ ಹೆಚ್ಚಿನ ಸ್ಕ್ರೀನ್ಗಳಲ್ಲಿ ಬಿಡುಗಡೆಯಾಗುವಂತಿಲ್ಲ.
ಆದರೆ ಫಿಲಂ ಚೇಂಬರ್ನ ನಿಯಮಗಳನ್ನು ಗಾಳಿಗೆ ತೂರಿದ ಈ ಎರಡೂ ಚಿತ್ರಗಳು ಕರ್ನಾಟಕದಲ್ಲಿ ಕೂಚಿಪುಡಿ ಕಥಕ್ಕಳಿ ಮೋಹಿನಿ ಆಟ್ಟಂ ಒಟ್ಟಿಗೆ ಆಡುತ್ತಿವೆ. ಇದನ್ನು ಫಿಲಂ ಚೇಂಬರ್ ಕಣ್ಣು ಬಾಯಿಬಿಟ್ಟುಕೊಂಡು ನೋಡುತ್ತಿರುವುದು ದುರಂತ. ಈ ಎರಡು ತೆಲುಗು ಚಿತ್ರಗಳು ಕರ್ನಾಟಕದಲ್ಲಿ ರು.5 ಕೋಟಿಗೂ ಅಧಿಕ ದುಡ್ಡನ್ನು ಬಾಚಿಕೊಂಡಿವೆ.
ಕಪಾಲಿ ಚಿತ್ರಮಂದಿರದಲ್ಲಿ ಅರ್ಧ ಶತಕ ಬಾರಿಸಿದ್ದೇ ತಡ 'ಜೋಗಯ್ಯ'ನಿಗೆ ಗೇಟ್ಪಾಸ್ ನೀಡಲಾಗಿದೆ. ಕಪಾಲಿಯಲ್ಲಿ ಈಗ 'ಊಸರವಳ್ಳಿ' ಚಿತ್ರ ಭರ್ಜರಿಯಾಗಿ ಪ್ರದರ್ಶನ ಕಾಣುತ್ತಿದ್ದು ತೆಲುಗು ಚಿತ್ರ ನಿರ್ಮಾಪಕರ ಜೇಬಿಗೆ ಚಿಲ್ಲರೆ ಕಾಸು ಹುಟ್ಟಿಸುತ್ತಿದೆ.
ವಿಚಿತ್ರ ಎಂದರೆ ಕಪಾಲಿ ಚಿತ್ರಮಂದಿರದಲ್ಲಿ 'ಜೋಗಯ್ಯ' ಚಿತ್ರ 50 ದಿನ ಪ್ರದರ್ಶನ ಕಂಡಿದ್ದಕ್ಕೆ ಆನಂದ ತುಂದಿಲರಾಗಿರುವ ಚಿತ್ರದ ನಿರ್ಮಾಪಕಿ ರಕ್ಷಿತಾ ಪ್ರೇಮ್ ಕರ್ನಾಟಕದ ಜನತೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ! ಗಾಂಧಿನಗರದ ಸುಬೇಧಾರ್ ಛತ್ರಂನ ಮತ್ತೊಂದು ಮೂಲೆಯ ಮೂವಿಲ್ಯಾಂಡ್ ಚಿತ್ರಮಂದಿರದಲ್ಲಿ 'ದೂಕುಡು' ಬಾಕ್ಸಾಫೀಸ್ ಕೊಳ್ಳೆಹೊಡೆಯುತ್ತಿದೆ. (ಒನ್ಇಂಡಿಯಾ ಕನ್ನಡ)