Don't Miss!
- News ನೇಹಾ ಕೊಲೆ ಪ್ರಕರಣ: ಆರೋಪಿಯನ್ನ ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಸೈಡ್ ಮಾಡಿಕೊಳ್ಳುವವರಿಗೊಂದು ನೀತಿಪಾಠ
ಆತ್ಮಹತ್ಯೆ ಮಾಡಿಕೊಳ್ಳುವುದು ತಪ್ಪು ಎಂದು ಎಲ್ಲರಿಗೂ ಗೊತ್ತು. ಆದರೂ ಅಂಥವರ ಸಂಖ್ಯೆ ಕಡಿಮೆಯಾಗಿಲ್ಲ. ಜೀವನದಲ್ಲಿ ಎಂಥದ್ದೇ ಕಷ್ಟ ಬಂದರೂ ತೊಂದರೆ ಎದುರಾದರೂ ಆತ್ಮಹತ್ಯೆಯಂಥಾ ದುಸ್ಸಾಹಸಕ್ಕೆ ಕೈ ಹಾಕಬೇಡಿ. ಧೈರ್ಯದಿಂದ ಜೀವನವನ್ನು ಎದುರಿಸಿ ಎಂದು ಆತ್ಮಹತ್ಯ ಮಾಡಿಕೊಳ್ಳಬೇಕೆನ್ನುವವರಿಗೆ ನೀತಿಪಾಠ ಹೇಳುವಂಥ ಸಿನಿಮಾವೊಂದು ತಯಾರಾಗಿದೆ .
'ಸೂಸೈಡ್' ಹೆಸರಿನ ಈ ಚಿತ್ರಕ್ಕೆ ಪ್ರಸಾದ್ ಗುರು ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ಬರೆದು ನಿರ್ದೇಶಿಸುವುದರ ಜೊತೆಗೆ ಅವರೇ ನಿರ್ಮಿಸಿದ್ದಾರೆ.ಈ ಚಿತ್ರದ ಪ್ರಥಮ ಪ್ರತಿ ಕಳೆದ ತಿಂಗಳು ಬಂದಿದ್ದು ಇತ್ತೀಚಿಗೆ ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಸಮಾಜಕ್ಕೆ ನೀತಿ ಪಾಠ ಹೇಳುವಂಥ ಅದ್ಭುತ ಸಿನಿಮಾ ಮಾಡಿದ್ದೀರಿ ಎಂದು ನಿರ್ದೇಶಕರನ್ನು ಪ್ರಶಂಸಿಸಿ ಚಿತ್ರಕ್ಕೆ ಎ ಸರ್ಟಿಫಿಕೇಟ್ ನೀಡಿದ್ದಾರೆ. ಆಗಸ್ಟ್ ತಿಂಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡಲಿದ್ದಾರೆ.
ನೆನಪು ಟಾಕೀಸ್ ಲಾಂಛನದಲಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಎ.ಟಿ.ರವಿ ಸಂಗೀತ, ಸುರೇಂದ್ರನಾಥ್ ಬೇಗೂರು ಛಾಯಾಗ್ರಹಣ, ಪಾಂಡು.ಕೆ.ರಾಮನಾರಾಯಣ್ ಸಾಹಿತ್ಯ ಈ ಚಿತ್ರದ ತಾರಾಬಳಗದಲ್ಲಿ ಋತ್ವಿಕ್, ಕಲ್ಯಾಣಿ, ಶರತ್ ಲೋಹಿತಾಶ್ವ, ಸುಚೇಂದ್ರ ಪ್ರಸಾದ್, ಸಂಗೀತಾ ಶೆಟ್ಟಿ, ಭಾಗ್ಯಲಕ್ಷ್ಮಿ, ಕೋಕಿಲಾ, ಸಾನು ಕಾವೇರಪ್ಪ ಅಭಿಯನಿಯಿಸಿದ್ದಾರೆ.