Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನನ್ನ ಗೋಪಾಲ ಚಿತ್ರದಲ್ಲಿ ಮೋಟಮ್ಮ
ರಾಷ್ಟ್ರಕವಿ ಕುವೆಂಪು ಅವರ ಮಕ್ಕಳ ನಾಟಕ 'ನನ್ನ ಗೋಪಾಲ' ಚಲನಚಿತ್ರವಾಗಿ ನಿರ್ಮಾಣವಾಗುತ್ತಿದೆ. ಇತ್ತೀಚೆಗೆ ಸಾವನದುರ್ಗದ ಶ್ರೀಲಕ್ಷ್ಮೀನರಸಿಂಹಸ್ವಾಮಿಯ ದೇಗುಲದಲ್ಲಿ ಖ್ಯಾತ ಸಾಹಿತಿ ಡಾ.ದೇಜಗೌ ಕ್ಯಾಮೆರಾ ಚಾಲನೆ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು ಹಾಗೂ ಒಂದು ಪಾತ್ರ ನಿರ್ವಹಣೆ ಕೂಡ ಮಾಡಿದರು. ಮಾಜಿ ಸಚಿವ ಎಂ.ಚಂದ್ರಶೇಖರ್ ಆರಂಭ ಫಲಕ ತೋರಿದರು.
ಸಿ.ಲಕ್ಷ್ಮಣ್ ನಿರ್ದೇಶನದ ಈ ಚಿತ್ರಕ್ಕೆ ಬಸವರಾಜ್ ಅವರ ಛಾಯಾಗ್ರಹಣವಿದೆ. ಎಂ.ಎಸ್.ಮಾರುತಿ ಸಂಗೀತ ನೀಡುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ರಾಜೇಶ್, ಶೃತಿ, ಅನಿಲ್ಕುಮಾರ್, ದೊಡ್ಡರಂಗೇಗೌಡ, ಮೋಟಮ್ಮ, ಡಿ.ಬಿ.ಚಂದ್ರೇಗೌಡ, ಡಿ.ವಿ.ರಾಜರಾಂ, ಶ್ರೀನಾಥ ಮೈಲಾರಪ್ಪ ಹಾಗೂ 22 ಜನ ಬಾಲ ಕಲಾವಿದರು ಅಭಿನಯಿಸುತ್ತಿದ್ದಾರೆ. ಸಾವನದುರ್ಗದ ಸುತ್ತಮುತ್ತ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ.
ಕುವೆಂಪು ಅವರ ನನ್ನ ಗೋಪಾಲ ಮಕ್ಕಳ ನಾಟಕ ವಿವಿಧ ಸ್ಥಳಗಳಲ್ಲಿ ಇದುವರೆಗೂ ಒಟ್ಟು 361 ಪ್ರದರ್ಶನಗಳನ್ನು ಕಂಡಿದೆ. 'ಮಸಣದ ಮಕ್ಕಳು' ಎಂಬ ಮಕ್ಕಳ ಚಿತ್ರವನ್ನು ನಿರ್ದೇಶಿದ್ದ ಸಿ ಲಕ್ಷ್ಮಣ್ ಇದೀಗ ನನ್ನ ಗೋಪಾಲ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಮೈಸೂರಿನ ಜಯಲಕ್ಷ್ಮಿಪುರಂ ನಲ್ಲಿ ಕುವೆಂಪು ಅವರನ್ನು ಭೇಟಿ ಮಾಡಿದ ದಿನಗಳನ್ನು ರಾಜೇಶ್ ನೆನೆಯುತ್ತಾ, ಅವರ ಮೇಲಿನ ಅಭಿಮಾನದಿಂದ ಈ ಚಿತ್ರವನ್ನು ಒಪ್ಪಿಕೊಂಡಿದ್ದಾಗಿ ಹಿರಿಯ ನಟ ರಾಜೇಶ್ ತಿಳಿಸಿದ್ದಾರೆ.