ನಿಷೇಧಾಜ್ಞೆ ಚಿತ್ರ ವೀರಯೋಧರಿಗೆ ಅರ್ಪಣೆ

ಭರತ್ಬಾಬು ಪ್ರೊಡಕ್ಷನ್ಸ್ ಅರ್ಪಿಸುವ ಶ್ರೀ ಅಂಜನಾಚಲ ಸೂಪರ್ಹಿಟ್ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗಿರುವ 'ನಿಷೇಧಾಜ್ಞೆ ಚಿತ್ರವನ್ನು ವೀರಯೋಧರ ಅಡಿದಾವರೆಗಳಿಗೆ ಅರ್ಪಿಸಿರುವುದಾಗಿ ನಿರ್ಮಾಪಕರಾದ ಎಸ್.ವಿ.ನಾರಾಯಣಸ್ವಾಮಿ ಹಾಗೂ ಸೂರ್ಯಕಾಂತ್ ಜಾದವ್ ತಿಳಿಸಿದ್ದಾರೆ.
ಚಿತ್ರೀಕರಣ ಒಳಗೊಂಡಂತೆ ನಂತರದ ಚಟುವಟಿಕೆಗಳು ಪೂರ್ಣವಾಗಿರುವ ಈ ಚಿತ್ರ ಇದೇ ತಿಂಗಳಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಬಸವರಾಜಪ್ಪ ಕಾರ್ಯಕಾರಿ ನಿರ್ಮಾಪಕರಾಗಿರುವ ಈ ಚಿತ್ರಕ್ಕೆ ನಿರ್ದೇಶಕ ಪದ್ಮನಾಭ ಅವರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.
ರಮೇಶ್ ಛಾಯಾಗ್ರಹಣ, ಗಿರಿಧರ್ ಸಂಗೀತ, ಯತೀಶ್ಕುಮಾರ್ ಸಂಕಲನ, ಅರವಿಂದ್ ನೃತ್ಯ, ಕೃಷ್ಣಾಚಾರ್ ಕಲೆ, ಲಕ್ಷ್ಮೀಕುಮಾರ್, ಮೂರ್ತಿ ಸಹನಿರ್ದೇಶನವಿರುವ ಚಿತ್ರದ ತಾರಾಬಳಗದಲ್ಲಿ ಆದಿಲೋಕೇಶ್, ಭರತ್ಬಾಬು, ಪ್ರಿಯಾಂಕ, ಪದ್ಮಜಾರಾವ್, ಶಂಕರ್ಅಶ್ವತ್, ನೀನಾಸಂ ಅಶ್ವತ್, ಸುರೇಶ್ಮಂಗಳೂರು, ಸ್ನೇಹಜಗದೀಶ್, ಹಾಗೂ ಧಮ್ಕುಮಾರ್ ಇದ್ದಾರೆ. ಮಾಜಿ ಪೊಲೀಸ್ ಅಧಿಕಾರಿ ಅಬ್ದುಲ್ಅಜೀಮ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.
(ದಟ್ಸ್ ಕನ್ನಡ ಸಿನಿಸುದ್ದಿ)


Click it and Unblock the Notifications











