Don't Miss!
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- News Karnataka Rain: ರಾಜ್ಯಕ್ಕೆ ಶೇ.20ರಷ್ಟು ಮಳೆ ಕೊರತೆ: ಏಪ್ರಿಲ್ 25 ದಿನದಲ್ಲಿ ಸುರಿದ ಮಳೆ ವರದಿ ಇಲ್ಲಿದೆ
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊಲೆ ರಹಸ್ಯ ಭೇದಿಸಲು ಹೊರಟ ರಮೇಶ್ ಗೆ ಶಾಕ್
ನಟ ರಮೇಶ್ ಕೊಲೆಯೊಂದರ ರಹಸ್ಯ ಭೇದಿಸಲು ಹೊರಟಿದ್ದಾರೆ. ಈ ಪತ್ತೆದಾರಿ ಕೆಲಸಕ್ಕೆ ಮತ್ತಿಬ್ಬರು ರಮೇಶ್ ಜೊತೆ ಕೈಜೋಡಿಸಲಿದ್ದಾರೆ. ಇದೇನಿದು ರಮೇಶ್ ಯಾವಾಗ ಪತ್ತೆದಾರಿ ಶುರುವಚ್ಚಿಕೊಂಡರು ಎಂದು 'ಶಾಕ್' ಆಗಬೇಡಿ.ರಮೇಶ್ ಹೊಸ ಚಿತ್ರದ ಶೀರ್ಷಿಕೆಯೇ 'ಶಾಕ್'.
ಒಂದು ಮನೆ ಮತ್ತು ಮೂರು ಪಾತ್ರಗಳ ಮೂಲಕ ಇಡೀ ಚಿತ್ರದ ಕಥೆ ಹೆಣೆಯಲಾಗಿದೆ. ಸೈಕೋ ಪಾತ್ರದಲ್ಲಿ ರಮೇಶ್ ಕಾಣಿಸಲಿದ್ದಾರೆ. ಈ ಚಿತ್ರಕ್ಕೆ ಆಕ್ಷನ್, ಕಟ್ ಹೇಳುತ್ತಿರುವವರು ಹ ಸು ರಾಜಶೇಖರ್. ಚಿತ್ರಕಥೆ, ಹಾಗೂ ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ.
ಸುಮಾಗುಹಾ ನಾಯಕಿಯಾಗಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನೀನಾಸಂ ಅಶ್ವತ್ ಇದ್ದಾರೆ. ಅರಸಿಕೆರೆಯ ಬಂಗಲೆಯಲ್ಲಿ ಚಿತ್ರೀಕರಣಭರದಿಂದ ಸಾಗಿದೆ. ಚಿತ್ರದಲ್ಲಿ ಈ ಬಂಗಲೆ ಪ್ರಮುಖ ಪಾತ್ರ ವಹಿಸಲಿದೆಯಂತೆ. ತೋಟದ ಬಂಗಲೆಯ ಮಾಲೀಕರನ ಕೊಲೆಗಾರ ಯಾರು? ಕೊಲೆ ಯಾಕೆ ನಡೆಯಿತು? ಎಂಬ ಪ್ರಶ್ನೆಗಳಿಗೆ ಉತ್ತರ ಹುಡುಕ ಹೊರಟವರಿಗೆ 'ಶಾಕ್' ಕಾದಿರುತ್ತದೆ.
ಅಮರಚಂದ್ ಜೈನ್, ವಿಜಯ್ ಸುರಾನಾ, ಮಂಗೀಲಾಲ್ ಜೈನ್ ಮತ್ತು ರಮೇಶ್ ರವರು ಶಾಕ್ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದ ಚಿತ್ರೀಕರಣ ಅರಸಿಕೆರೆಯಲ್ಲಿ ಆರಂಭವಾಗಿದೆ. ಶ್ರೀಸಂಕೇಶ್ವರ ಫಿಲಂಸ್ ಲಾಂಛನದಲ್ಲಿ ಈ ಚಿತ್ರವನ್ನು ತೆರೆಗೆ ತರುತ್ತಿದ್ದಾರೆ. ನಿರಂಜನಬಾಬು ಛಾಯಾಗ್ರಹಣ, ಶ್ರೀನಿವಾಸ್ರೆಡ್ಡಿ ಸಂಕಲನ, ಬಾಬುಖಾನ್ ಕಲಾನಿರ್ದೇಶನ ಹಾಗೂ ಜಾನಿ ಅವರ ಸಾಹಸ ನಿರ್ದೇಶನದೆ.