Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊಲೆ ರಹಸ್ಯ ಭೇದಿಸಲು ಹೊರಟ ರಮೇಶ್ ಗೆ ಶಾಕ್
ನಟ ರಮೇಶ್ ಕೊಲೆಯೊಂದರ ರಹಸ್ಯ ಭೇದಿಸಲು ಹೊರಟಿದ್ದಾರೆ. ಈ ಪತ್ತೆದಾರಿ ಕೆಲಸಕ್ಕೆ ಮತ್ತಿಬ್ಬರು ರಮೇಶ್ ಜೊತೆ ಕೈಜೋಡಿಸಲಿದ್ದಾರೆ. ಇದೇನಿದು ರಮೇಶ್ ಯಾವಾಗ ಪತ್ತೆದಾರಿ ಶುರುವಚ್ಚಿಕೊಂಡರು ಎಂದು 'ಶಾಕ್' ಆಗಬೇಡಿ.ರಮೇಶ್ ಹೊಸ ಚಿತ್ರದ ಶೀರ್ಷಿಕೆಯೇ 'ಶಾಕ್'.
ಒಂದು ಮನೆ ಮತ್ತು ಮೂರು ಪಾತ್ರಗಳ ಮೂಲಕ ಇಡೀ ಚಿತ್ರದ ಕಥೆ ಹೆಣೆಯಲಾಗಿದೆ. ಸೈಕೋ ಪಾತ್ರದಲ್ಲಿ ರಮೇಶ್ ಕಾಣಿಸಲಿದ್ದಾರೆ. ಈ ಚಿತ್ರಕ್ಕೆ ಆಕ್ಷನ್, ಕಟ್ ಹೇಳುತ್ತಿರುವವರು ಹ ಸು ರಾಜಶೇಖರ್. ಚಿತ್ರಕಥೆ, ಹಾಗೂ ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ.
ಸುಮಾಗುಹಾ ನಾಯಕಿಯಾಗಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನೀನಾಸಂ ಅಶ್ವತ್ ಇದ್ದಾರೆ. ಅರಸಿಕೆರೆಯ ಬಂಗಲೆಯಲ್ಲಿ ಚಿತ್ರೀಕರಣಭರದಿಂದ ಸಾಗಿದೆ. ಚಿತ್ರದಲ್ಲಿ ಈ ಬಂಗಲೆ ಪ್ರಮುಖ ಪಾತ್ರ ವಹಿಸಲಿದೆಯಂತೆ. ತೋಟದ ಬಂಗಲೆಯ ಮಾಲೀಕರನ ಕೊಲೆಗಾರ ಯಾರು? ಕೊಲೆ ಯಾಕೆ ನಡೆಯಿತು? ಎಂಬ ಪ್ರಶ್ನೆಗಳಿಗೆ ಉತ್ತರ ಹುಡುಕ ಹೊರಟವರಿಗೆ 'ಶಾಕ್' ಕಾದಿರುತ್ತದೆ.
ಅಮರಚಂದ್ ಜೈನ್, ವಿಜಯ್ ಸುರಾನಾ, ಮಂಗೀಲಾಲ್ ಜೈನ್ ಮತ್ತು ರಮೇಶ್ ರವರು ಶಾಕ್ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದ ಚಿತ್ರೀಕರಣ ಅರಸಿಕೆರೆಯಲ್ಲಿ ಆರಂಭವಾಗಿದೆ. ಶ್ರೀಸಂಕೇಶ್ವರ ಫಿಲಂಸ್ ಲಾಂಛನದಲ್ಲಿ ಈ ಚಿತ್ರವನ್ನು ತೆರೆಗೆ ತರುತ್ತಿದ್ದಾರೆ. ನಿರಂಜನಬಾಬು ಛಾಯಾಗ್ರಹಣ, ಶ್ರೀನಿವಾಸ್ರೆಡ್ಡಿ ಸಂಕಲನ, ಬಾಬುಖಾನ್ ಕಲಾನಿರ್ದೇಶನ ಹಾಗೂ ಜಾನಿ ಅವರ ಸಾಹಸ ನಿರ್ದೇಶನದೆ.