Don't Miss!
- News 5 ವರ್ಷಗಳಲ್ಲಿ ಕರ್ನಾಟಕ ಸಂಸದರ ಸಾಧನೆ ಏನು? ಅಧ್ಯಯನ ಹೇಳೋದೇನು?
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚೆಲುವನಾರಾಯಣನ ದಿವ್ಯ ಸನ್ನಿಧಿಯಲ್ಲಿ ವೀರಬಾಹು
ಚೆಲುವನಾರಾಯಣನ ದಿವ್ಯಸನ್ನಿಧಿಯ ಮೇಲುಕೋಟೆಯಲ್ಲಿ ಸಂದೇಶ್ನಾಗರಾಜ್ ನಿರ್ಮಿಸುತ್ತಿರುವ 'ವೀರಬಾಹು' ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ನಿಸರ್ಗ ದೇವತೆ ನೆಲೆಯೂರಿ ನಿಂತಿರುವ ಈ ಊರು ಚಿತ್ರದಲ್ಲಿ ನಾಯಕಿಯ ತವರುಮನೆ.
ನಾಯಕಿಯ ಕುಟುಂಬದವರ ಪರಿಚಯ ಹಾಗೂ ನಾಯಕಿಯ ಮದುವೆಯ ಸಂದರ್ಭದ ಚಿತ್ರೀಕರಣವನ್ನು ಮೇಲುಕೋಟೆಯಲ್ಲೆ ನಡೆಸಿರುವುದಾಗಿ ನಿರ್ದೇಶಕ ಎಸ್.ಮಹೇಂದರ್ ತಿಳಿಸಿದ್ದಾರೆ. ವಿಜಯ್, ನಿಧಿಸುಬ್ಬಯ್ಯ, ಎ.ಟಿ.ರಘು, ರಂಗಾಯಣರಘು, ಅವಿನಾಶ್, ಧರ್ಮ, ವಿನಯಾಪ್ರಸಾದ್, ಕಿಶೋರಿಬಲ್ಲಾಳ್, ಅಚ್ಯುತ್ಕುಮಾರ್, ರೇಖಾಕುಮಾರಿ ಮುಂತಾದ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.
ಆಗಸ್ಟ್ 15ರ ನಂತರ ಮುತ್ತತ್ತಿ ಹಾಗೂ ಮೇಕೆದಾಟಿನಲ್ಲಿ 'ವೀರಬಾಹು' ಚಿತ್ರದ ಚಿತ್ರೀಕರಣ ನಡೆಯಲಿದೆ. ವಿ.ಹರಿಕೃಷ್ಣರ ಸಂಗೀತವಿರುವ ಈ ಚಿತ್ರಕ್ಕೆ ಅನಂತ್ ಅರಸ್ ಅವರ ಛಾಯಾಗ್ರಹಣವಿದೆ. ದೀಪು ಎಸ್ ಕುಮಾರ್ ಸಂಕಲನ, ಪ್ರಸಾದ್ ಸಹ ನಿರ್ದೇಶನ, ಎಂ.ಎಸ್.ರಮೇಶ್ ಸಂಭಾಷಣೆ ಹಾಗೂ ವಿಜಯಕುಮಾರ್ ನಿರ್ಮಾಣ ನಿರ್ವಹಣೆಯಿದೆ.
ವಿಜಯ್, ನಿಧಿಸುಬ್ಬಯ್ಯ, ರಂಗಾಯಣರಘು, ರಾಜುತಾಳಿಕೋಟೆ, ಅವಿನಾಶ್, ಎಂ.ಎನ್.ಲಕ್ಷ್ಮೀದೇವಿ, ಎ.ಟಿ.ರಘು, ಅಚ್ಯುತ್ಕುಮಾರ್, ರೇಖಾಕುಮಾರ್, ಧರ್ಮ, ಕಿಶೋರಿಬಲ್ಲಾಳ್, ವಿನಯಪ್ರಸಾದ್ ತಾರಾಬಳಗವಿದೆ. ಸಂದೇಶ್ ಕಂಬೈನ್ಸ್ ನಲ್ಲಿ ಚಿತ್ರವನ್ನು ನಿರ್ಮಿಸಲಾಗುತ್ತಿದೆ.