Don't Miss!
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Finance ಒಂದೇ ವರ್ಷದಲ್ಲಿ 210 ಕೋಟಿ ರೂ. ಆದಾಯ ಗಳಿಸಿದ ಭಾರತದಲ್ಲಿನ ಆಪಲ್ ಸ್ಟೋರ್ಗಳು
- News Subrahmanya Dhareshwara: ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚೆಲುವನಾರಾಯಣನ ದಿವ್ಯ ಸನ್ನಿಧಿಯಲ್ಲಿ ವೀರಬಾಹು
ಚೆಲುವನಾರಾಯಣನ ದಿವ್ಯಸನ್ನಿಧಿಯ ಮೇಲುಕೋಟೆಯಲ್ಲಿ ಸಂದೇಶ್ನಾಗರಾಜ್ ನಿರ್ಮಿಸುತ್ತಿರುವ 'ವೀರಬಾಹು' ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ನಿಸರ್ಗ ದೇವತೆ ನೆಲೆಯೂರಿ ನಿಂತಿರುವ ಈ ಊರು ಚಿತ್ರದಲ್ಲಿ ನಾಯಕಿಯ ತವರುಮನೆ.
ನಾಯಕಿಯ ಕುಟುಂಬದವರ ಪರಿಚಯ ಹಾಗೂ ನಾಯಕಿಯ ಮದುವೆಯ ಸಂದರ್ಭದ ಚಿತ್ರೀಕರಣವನ್ನು ಮೇಲುಕೋಟೆಯಲ್ಲೆ ನಡೆಸಿರುವುದಾಗಿ ನಿರ್ದೇಶಕ ಎಸ್.ಮಹೇಂದರ್ ತಿಳಿಸಿದ್ದಾರೆ. ವಿಜಯ್, ನಿಧಿಸುಬ್ಬಯ್ಯ, ಎ.ಟಿ.ರಘು, ರಂಗಾಯಣರಘು, ಅವಿನಾಶ್, ಧರ್ಮ, ವಿನಯಾಪ್ರಸಾದ್, ಕಿಶೋರಿಬಲ್ಲಾಳ್, ಅಚ್ಯುತ್ಕುಮಾರ್, ರೇಖಾಕುಮಾರಿ ಮುಂತಾದ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.
ಆಗಸ್ಟ್ 15ರ ನಂತರ ಮುತ್ತತ್ತಿ ಹಾಗೂ ಮೇಕೆದಾಟಿನಲ್ಲಿ 'ವೀರಬಾಹು' ಚಿತ್ರದ ಚಿತ್ರೀಕರಣ ನಡೆಯಲಿದೆ. ವಿ.ಹರಿಕೃಷ್ಣರ ಸಂಗೀತವಿರುವ ಈ ಚಿತ್ರಕ್ಕೆ ಅನಂತ್ ಅರಸ್ ಅವರ ಛಾಯಾಗ್ರಹಣವಿದೆ. ದೀಪು ಎಸ್ ಕುಮಾರ್ ಸಂಕಲನ, ಪ್ರಸಾದ್ ಸಹ ನಿರ್ದೇಶನ, ಎಂ.ಎಸ್.ರಮೇಶ್ ಸಂಭಾಷಣೆ ಹಾಗೂ ವಿಜಯಕುಮಾರ್ ನಿರ್ಮಾಣ ನಿರ್ವಹಣೆಯಿದೆ.
ವಿಜಯ್, ನಿಧಿಸುಬ್ಬಯ್ಯ, ರಂಗಾಯಣರಘು, ರಾಜುತಾಳಿಕೋಟೆ, ಅವಿನಾಶ್, ಎಂ.ಎನ್.ಲಕ್ಷ್ಮೀದೇವಿ, ಎ.ಟಿ.ರಘು, ಅಚ್ಯುತ್ಕುಮಾರ್, ರೇಖಾಕುಮಾರ್, ಧರ್ಮ, ಕಿಶೋರಿಬಲ್ಲಾಳ್, ವಿನಯಪ್ರಸಾದ್ ತಾರಾಬಳಗವಿದೆ. ಸಂದೇಶ್ ಕಂಬೈನ್ಸ್ ನಲ್ಲಿ ಚಿತ್ರವನ್ನು ನಿರ್ಮಿಸಲಾಗುತ್ತಿದೆ.