Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆ.ಕೆ ಫಾರಂನಲ್ಲಿ ವಿಸ್ಮಯ ಪ್ರಣಯ!
ರಾಜ್ಸಾಗರ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ 'ವಿಸ್ಮಯ ಪ್ರಣಯ' ಚಿತ್ರದ ಹಾಡು ಕನಕಪುರ ರಸ್ತೆಯಲ್ಲಿರುವ ಕೆ.ಕೆ.ಫಾರಂನಲ್ಲಿ ಚಿತ್ರೀಕರಣಗೊಂದಡಿದೆ. ರಾಂನಾರಾಯಣ್ ರಚನೆಯ 'ಒಂದೊಂದು ದಿವಸ ಕಾಯುತ್ತಿದೆ ಮನಸ - ಹೇಳಿಕೊಳ್ಳಲು ಈ ಹರುಷ' ಎಂಬ ಈ ಗೀತೆಯ ಚಿತ್ರೀಕರಣದಲ್ಲಿ ರಾಜ್ಸಾಗರ್, ಮಯೂರಿ, ಹೇಮಾಚೌಧರಿ, ಕಾವ್ಯಶ್ರೀ, ಮಿಮಿಕ್ರಿ ರಾಜ್ಗೋಪಾಲ್ ಹಾಗೂ ಅಪೂರ್ವ ಪಾಲ್ಗೊಂಡಿದ್ದರು.
ವಿಜಿ ನೃತ್ಯ ಸಂಯೋಜನೆಯಲ್ಲಿ ಮೂಡಿ ಬಂದ ಈ ಗೀತೆಯನ್ನು ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಹಾಡಿದ್ದಾರೆ. ನಾಯಕನಾಗಿ ನಟಿಸುತ್ತಿರುವ ರಾಜ್ಸಾಗರ್ ಚಿತ್ರಕ್ಕೆ ಕಥೆ ಬರೆದಿರುವುದಲ್ಲದೆ, ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಹದಿನೇಳು ವರ್ಷದ ಹಿಂದೆ 'ಮೌನ ಸಂಗ್ರಾಮ' ಚಿತ್ರವನ್ನು ನಿರ್ದೇಶಿಸಿದ್ದ ಮೋಹನ್ ಮಲ್ಲಪಳ್ಳಿ ಈ ಚಿತ್ರವನ್ನು ನಿರ್ದೇಶಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಮರಳಿ ಬಂದಿದ್ದಾರೆ.
ನಿರ್ದೇಶಕರೇ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಕೆ.ವಿಶ್ವನಾಥ್ ಸಂಗೀತ, ಮ್ಯಾಥ್ಯೂರಾಜನ್ ಛಾಯಾಗ್ರಹಣ, ಗಿರೀಶ್ಕುಮಾರ್ ಸಂಕಲನ, ಡಿಫ಼ರೆಂಟ್ ಡ್ಯಾನಿ ಸಾಹಸ ಹಾಗೂ ಬಿ.ಕೃಷ್ಣ ಅವರ ನಿರ್ಮಾಣ ನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ರಾಜ್ಸಾಗರ್, ಮಯೂರಿ, ಕಾವ್ಯಶ್ರೀ, ಹೇಮಾಚೌಧರಿ, ಇಂದ್ರನ್ಸ್, ರಾಮಿರೆಡ್ಡಿ, ಅಪೂರ್ವ, ಕರಿಬಸವಯ್ಯ, ರೇಖಾದಾಸ್, ಮಿಮಿಕ್ರಿ ರಾಜ್ಗೋಪಾಲ್ ಮುಂತಾದವರಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)