Don't Miss!
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಮಾಶ್ರೀ, ಪ್ರಕಾಶ್ ರೈಗೆ ಸಿಎಂ ಅಭಿನಂದನೆ
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ನಟಿ ಹಾಗೂ ಅತ್ಯುತ್ತಮ ನಟ ಪ್ರಶಸ್ತಿಗೆ ಪಾತ್ರರಾಗಿರುವ ನಟಿ ಉಮಾಶ್ರೀ ಹಾಗೂ ಪ್ರಕಾಶ್ ರೈ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಭಿನಂದಿಸಿದ್ದಾರೆ.
"ಕನ್ನಡದ 'ಗುಲಾಬಿ ಟಾಕೀಸ್' ಚಿತ್ರದ ಅಭಿನಯಕ್ಕಾಗಿ ಉಮಾಶ್ರೀ ಅವರಿಗೂ ತಮಿಳಿನ 'ಕಾಂಜೀವರಂ 'ಚಿತ್ರದಲ್ಲಿನ ಅಭಿನಯಕ್ಕಾಗಿ ಪ್ರಕಾಶ್ ರೈ ಅವರಿಗೂ ರಾಷ್ಟ್ರೀಯ ಗೌರವ ಲಭಿಸಿದ್ದು, ಈ ಇಬ್ಬರು ಕನ್ನಡಿಗರಿಗೂ ಕರ್ನಾಟಕದ ಸಮಸ್ತ ಜನರ ಪರವಾಗಿ ಹೃದಯಪೂರ್ವಕ ಶುಭಾಶಯಗಳು ಸಲ್ಲುತ್ತವೆ" ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಪ್ರಾದೇಶಿಕ ನಿರ್ದೇಶಕ ಶ್ರೀ ಗಿರೀಶ್ ಕಾಸರವಳ್ಳಿ ಅವರಿಗೂ ಕನ್ನಡದ ಸಮಸ್ತ ಜನರ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಹಾಗೆಯೇ ಅಬಕಾರಿ, ಐಟಿಬಿಟಿ, ವಾರ್ತಾ ಹಾಗೂ ಬೆಂಗಳೂರು ಜಲ ಮಂಡಳಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಅಭಿನಂದಿಸಿದ್ದಾರೆ. ಉಮಾಶ್ರೀ ಮತ್ತು ಪ್ರಕಾಶ್ ರೈ ಅವರಿಗೆ ಮೇಲ್ಮನೆಯಲ್ಲೂ ಅಭಿನಂದನೆಗಳ ಸುರಿಮಳೆಯಾಯಿತು.
(ದಟ್ಸ್ ಕನ್ನಡ ಚಿತ್ರವಾರ್ತೆ)