Don't Miss!
- Automobiles
ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್
- Finance
7th Pay Commission: ನೌಕರರಿಗೆ ಸಿಹಿ ಸುದ್ದಿ: ಬಾಕಿ DA ಹಣ ನೀಡಲು ಕೇಂದ್ರ ಸರ್ಕಾರ ನಿರ್ಧಾರ, ಹೇಗೆ?
- News
ಉದ್ಯಾನವನಕ್ಕೆ ಇಟ್ಟಿದ್ದ ಟಿಪ್ಪು ಸುಲ್ತಾನ್ ಹೆಸರು ತೆಗೆದ ಮಹಾರಾಷ್ಟ್ರ
- Sports
KCC Cup 2023: ಯಾವ ತಂಡಕ್ಕೆ ಯಾರು ನಾಯಕ?; ಸುದೀಪ್ ತಂಡದಲ್ಲಿ ಯೂನಿವರ್ಸಲ್ ಬಾಸ್!
- Technology
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- Lifestyle
ಸಂಗಾತಿ ಸುಮ್-ಸಮ್ಮನೇ ಸಂಶಯ ಪಡುತ್ತಾರಾ? ಅವರ ಸಂಶಯ ಹೋಗಲಾಡಿಸಲು ಏನು ಮಾಡಬೇಕು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಬೆಳ್ಳಿಹೆಜ್ಜೆಯಲ್ಲಿ ಅಭಿನಯ ಶಾರದೆ ಜಯಂತಿ
ಬೆಂಗಳೂರು ಜೆಸಿ ರಸ್ತೆಯಲ್ಲಿರುವ ಬಾದಾಮಿ ಹೌಸ್ ನ ಪ್ರಿಯದರ್ಶಿನಿ ಸಭಾಂಗಣದಲ್ಲಿ ಮಾರ್ಚ್13 ರ ಶನಿವಾರ ಬೆಳ್ಳಿಹೆಜ್ಜೆ ಕಾರ್ಯಕ್ರಮ ನಡೆಯಲಿದೆ. ತಮ್ಮ ಅಮೋಘ ಅಭಿನಯದ ಮೂಲಕ ಎಂಥಹ ಪಾತ್ರಗಳಿಗೂ ಜಯಂತಿ ಜೀವತುಂಬುತ್ತಿದ್ದರು ಜಯಂತಿ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಮರಾಠಿ ಭಾಷೆಯ 500ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ ಹೆಗ್ಗಳಿಕೆ ಜಯಂತಿ ಅವರದು.
ಮಾಂತ್ರಿಕ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರ 'ನಾಗರಹಾವು' (1972)ಚಿತ್ರದ ''ಕನ್ನಡ ನಾಡಿನ ವೀರರಮಣಿಯ...'' ಹಾಡು ಕೇಳಿದರೆ ಎಂಥವರಿಗೂ ಮೈ ಜುಂ ಎನ್ನ್ನುತ್ತದೆ. ಜಯಂತಿ ಅವರ ಅಮೋಘ ಅಭಿನಯ ನಿಜವಾಗಿಯೂ ಓಬವ್ವಳನ್ನೇ ಕಣ್ಣಮುಂದೆ ನಿಲ್ಲಿಸುತ್ತದೆ. ಕನ್ನಡ ನಾಡಿನ ಇತಿಹಾಸದಲ್ಲಿ ಒನಕೆ ಓಬವ್ವಳ ಸಾಹಸಗಾಥೆ ನಿಜಕ್ಕೂ ರೋಮಾಂಚನ. ಓಬವ್ವನ ಪಾತ್ರಕ್ಕೆ ಜೀವತುಂಬಿ ಕನ್ನಡಿಗರ ಹೃದಯಲ್ಲಿ ಶಾಶ್ವತ ಸ್ಥಾನ ಸಂಪಾದಿಸಿದ ನಟಿ.
ಈ ಹಿಂದೆ ಬೆಳ್ಳಿಹೆಜ್ಜೆ ಕಾರ್ಯಕ್ರಮದಲ್ಲಿ ಪಾರ್ವತಮ್ಮ ರಾಜ್ ಕುಮಾರ್, ದ್ವಾರಕೀಶ್, ಡಾ.ಬಿ ಸರೋಜಾದೇವಿ ಮತ್ತು ನಿರ್ದೇಶಕ ಸಿದ್ದಲಿಂಗಯ್ಯ ಭಾಗವಹಿಸಿದ್ದರು. ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಟಿ ಎಸ್ ನಾಗಾಭರಣ ಅವರು ಈ ಕಾರ್ಯಕ್ರದ ರೂವಾರಿ. 'ಜೇನು ಗೂಡು' ಚಿತ್ರದ ಮೂಲಕ ಕನ್ನಡಬೆಳ್ಳಿತೆರೆಗೆ ಹೆಜ್ಜೆಯಿಟ್ಟ ಜಯಂತಿ ಈ ಬಾರಿಯ ಬೆಳ್ಳಿಹೆಜ್ಜೆಯಲ್ಲಿ ತಮ್ಮ ಅನುಭವಗಳನ್ನು ಸಹೃದಯರೊಂದಿಗೆ ಹಂಚಿಕೊಳ್ಳಲಿದ್ದಾರೆ.