Don't Miss!
- News Karnataka rain: ಗುಡುಗು, ಸಿಡಿಲು ಬಡಿತದಿಂದ ರಕ್ಷಣೆ ಪಡೆಯಲು ಏನೇನು ಮಾಡಬೇಕು? ಸಲಹೆಗಳು ಇಲ್ಲಿವೆ
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
66ನೇ ಹುಟ್ಟುಹಬ್ಬದಂದು ಅಮಿತಾಭ್ ಆಸ್ಪತ್ರೆಗೆ ದಾಖಲು
ಮುಂಬೈ, ಅ. 11 : ತಮ್ಮ 66ನೆಯ ಹುಟ್ಟುಹಬ್ಬದಂದೆ ಹಿಂದಿ ಚಿತ್ರತಾರೆ ಅಮಿತಾಭ್ ಬಚ್ಚನ್ ಅವರು ಹೊಟ್ಟೆ ನೋವಿನ ಕಾರಣ ಇಲ್ಲಿಯ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸ್ನಾನ ಮುಗಿಸಿ ಪೂಜೆ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಅವರನ್ನು ಚಿಕಿತ್ಸೆಗಾಗಿ ನಾನಾವತಿ ಆಸ್ಪತ್ರೆಗೆ ತರಲಾಯಿತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಲೀಲಾವತಿ ಆಸ್ಪತ್ರೆಗೆ ಕರೆತರಲಾಗಿದೆ.
ಅಮಿತಾಭ್ ಹೆಂಡತಿ ಜಯಾ ಬಚ್ಚನ್, ಮಗ ಅಭಿಷೇಕ್, ಸೊಸೆ ಐಶ್ವರ್ಯ ಮತ್ತು ಮಗಳು ಶ್ವೇತಾ ಅಮಿತಾಭ್ ಬಳಿಯಲ್ಲಿಯೇ ಇದ್ದಾರೆ. ಕೇವಲ ತಪಾಸಣೆಗಾಗಿ ಆಸ್ಪತ್ರೆಗೆ ತರಲಾಗಿದ್ದು ಆತಂಕಕ್ಕೆ ಕಾರಣವಿಲ್ಲ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ತಮ್ಮ ಆರಾಧ್ಯದೈವದ ಹುಬ್ಬಹಬ್ಬದಂದು ಅಮಿತಾಭ್ ಅವರನ್ನು ಹಾರೈಸಲು ಸಹಸ್ರಾರು ಅಭಿಮಾನಿಗಳು ಅವರ ಮನೆಯ ಮುಂದೆ ನೆರೆದಿದ್ದರು. ಅವರು ಅಸ್ವಸ್ಥರಾಗಿದ್ದಾರೆಂದು ತಿಳಿದ ತಕ್ಷಣ ಅಭಿಮಾನಿಗಳಲ್ಲಿ ಆತಂಕದ ಛಾಯೆ ಮೂಡಿದೆ. ನಾನಾವತಿ ಆಸ್ಪತ್ರೆಯ ಬಳಿಯೂ ಅಭಿಮಾನಿಗಳು ನೆರೆದಿದ್ದಾರೆ.
1982ರಲ್ಲಿ ಕೂಲಿ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುವ ಸಂದರ್ಭದಲ್ಲಿ ನಟ ಪುನೀತ್ ಇಸ್ಸಾರ್ ಅವರಿಂದ ಆಕಸ್ಮಿಕವಾಗಿ ಅಮಿತಾಭ್ ಇರಿತಕ್ಕೆ ಒಳಗಾಗಿದ್ದರು. ಇದೇ ಮರುಕಳಿಸುತ್ತಿರುವ ಹೊಟ್ಟೆನೋವಿಗೆ ಮೂಲ ಕಾರಣ ಇರಬಹುದೆಂದು ತರ್ಕಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)