Don't Miss!
- News Tulsi Gowda: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿ ಗೌಡ ಆರೋಗ್ಯದಲ್ಲಿ ಏರುಪೇರು: ಐಸಿಯುಗೆ ದಾಖಲು
- Finance ಎವರೆಸ್ಟ್ ಮಾತ್ರವಲ್ಲ ಎಂಡಿಎಚ್ನ ಉತ್ಪನ್ನದಲ್ಲೂ ಕೀಟನಾಟಕ ಪತ್ತೆ
- Sports ಟಿ20 ವಿಶ್ವಕಪ್ನಲ್ಲಿ ವಿರಾಟ್ ಕೊಹ್ಲಿಗೆ ಬ್ಯಾಟಿಂಗ್ ಕ್ರಮಾಂಕ ನೀಡಿದ ಆರೋನ್ ಫಿಂಚ್
- Lifestyle ರಾಜ್ಯದಲ್ಲಿ ಮುಂದಿನ 1 ವಾರ ಹವಾಮಾನ ಹೇಗಿರಲಿದೆ? ಎಲ್ಲೆಲ್ಲಿ ಮಳೆಯಾಗಲಿದೆ?
- Technology ಲಾವಾ ಅಗ್ನಿ 2 5G ಮೊಬೈಲ್ ಬೆಲೆಯಲ್ಲಿ ದಿಢೀರ್ ಇಳಿಕೆ; ಗ್ರಾಹಕರಿಗೆ ಖುಷಿ!
- Automobiles ಮಾರುಕಟ್ಟೆಯಲ್ಲಿ ಸುನಾಮಿ ಎಬ್ಬಿಸಲು ಹೊಸ ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ಅನಾವರಣ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿತೆರೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಜೀವನ ಚೈತ್ರ
ಅಬಕಾರಿ ಸಚಿವ ರೇಣುಕಾಚಾರ್ಯ ಅವರು ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದಾರೆ. ಈ ಚಿತ್ರದ ಕಥಾ ನಾಯಕ ಶ್ರೀಮಾನ್ ಬಿ ಎಸ್ ಯಡಿಯೂರಪ್ಪ. ಆದರೆ ಚಿತ್ರದ ನಾಯಕ ನಟ ಮಾತ್ರ ಯಾರು ಎಂಬುದನ್ನು ಇನ್ನೂ ಅಂತಿಮವಾಗಿಲ್ಲ. ಆಕ್ಷನ್, ಕಟ್ ಹೇಳುವವರು ಎಸ್ ವಿ ರಾಜೇಂದ್ರ ಸಿಂಗ್ ಬಾಬು.
ಯಡಿಯೂರಪ್ಪ ಅವರ ರಾಜಕೀಯ ಜೀವನದ ಏಳುಬೀಳುಗಳು, ಬದುಕಿನ ಸಾಧಕ ಬಾಧಕಗಳನ್ನು ತೆರೆಗೆ ತರಲು ಹೊರಟಿದ್ದಾರೆ ರೇಣುಕಾಚಾರ್ಯ. ಈ ಮೂಲಕವಾದರೂ ಯಡಿಯೂರಪ್ಪನವರಿಗೆ ತಮ್ಮ ಕಿರು ಕಾಣಿಕೆಯನ್ನು ಸಲ್ಲಿಸುವ ತವಕ ತಲ್ಲಣ ಅವರದು.
ಇತ್ತೀಚೆಗೆ ಸಿಂಗ್ ಬಾಬು ಅವರನ್ನು ಭೇಟಿ ಮಾಡಿದ ರೇಣುಕಾಚಾರ್ಯ, ಈ ವಿಷಯವನ್ನು ಅವರಿಗೆ ತಿಳಿಸಿದ್ದಾರೆ.ಇದರಿಂದ ಥ್ರಿಲ್ ಆದ ಬಾಬು ಈ ಪ್ರಾಜೆಕ್ಟ್ ತಮಗೆ ಸಿಕ್ಕಿದ್ದಕ್ಕೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಚಿತ್ರದ ರೂಪರೇಷಗಳು ಇನ್ನಷ್ಟೆ ಸಿದ್ಧಗೊಳ್ಳಬೇಕು.
ಕತೆ,ಕಾದಂಬರಿಯನ್ನು ಚಿತ್ರವಾಗಿಸುವುದು ಸುಲಭ. ಆದರೆ ವ್ಯಕ್ತಿಯೊಬ್ಬರ ಜೀವನ ಚರಿತ್ರೆಯನ್ನು ತೆರೆಗೆ ತರುವುದು ತುಂಬಾ ಕಷ್ಟ ಎನ್ನುತ್ತಾರೆ ಸಿಂಗ್ ಬಾಬು. ಯಡಿಯೂರಪ್ಪನವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಬೂಕನಕೆರೆ ಸೇರಿದಂತೆ ಶಿಕಾರಿಪುರ, ಶಿವಮೊಗ್ಗ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಆದರೆ ಚಿತ್ರದ ನಾಯಕ ನಟ ಯಾರು ಎಂಬುದೇ ಸದ್ಯದ ಕುತೂಹಲ. (ದಟ್ಸ್ಕನ್ನಡ ಸಿನಿವಾರ್ತೆ)