Don't Miss!
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಪೈಸಿ ನಟಿ ಡೈಸಿ ಬೋಪಣ್ಣನಿಗೆ ಪುರುಸೊತ್ತಿಲ್ಲಣ್ಣೋ!
''ಬೆನ್ನುಮೂಳೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದೆ.ಹಾಗಾಗಿ ಮಿಸುಕಾಡುವಂತಿರಲಿಲ್ಲ.ಈ ಸಂದರ್ಭದಲ್ಲಿ ಅರ್ಧಕ್ಕೆ ನಿಂತಿದ್ದ ನನ್ನ ಶಿಕ್ಷಣವನ್ನು ಪೂರ್ಣಗೊಳಿಸಿದ್ದೇನೆ'' ಎನ್ನುತ್ತಾರೆ ಡೈಸಿ. 'ಒಲವೆ ಜೀವನ ಲೆಕ್ಕಾಚಾರ'ದಲ್ಲಿ ಅತಿಥಿ ಪಾತ್ರವನ್ನು ಹೊರತುಪಡಿಸಿದರೆ, ಕಳೆದ ಒಂದು ವರ್ಷದಲ್ಲಿ ಸಿನಿಮಾಗೆ ಸಂಬಂಧಿಸಿದ ಯಾವೊಂದು ಕೆಲಸದಲ್ಲೂ ಭಾಗಿಯಾಗಿಲ್ಲ.
ಒಲವೇ ಜೀವನ ಲೆಕ್ಕಾಚಾರದಲ್ಲಿ ಹಾಗೆ ಬಂದು ಹೀಗೆ ಹೋಗುವ ಪಾತ್ರ. ಅಮೃತಧಾರೆಯಲ್ಲಿ ಅಮಿತಾಬ್ ಅತಿಥಿ ಪಾತ್ರವಿದ್ದಂತೆ ಎಂಬ ವಿವರಗಳನ್ನು ಡೈಸಿ ನೀಡಿದ್ದಾರೆ. ಏತನ್ಮಧ್ಯೆ ಡೈಸಿ ನಟಿಸಿರುವ ತೆಲುಗು ಚಿತ್ರ 'ಸ್ವೀಟ್ ಹರ್ಟ್' ಮುಕ್ತಾಯವಾಗಿದೆ. ಶಸ್ತ್ರಚಿಕಿತ್ಸೆಗೆ ಒಳಗಾದ ಕಾರಣ ದೇಹದ ತೂಕ ಏರುಪೇರಾಗಿತ್ತು. ವ್ಯಾಯಾಮ ಮಾಡದ ಕಾರಣ 12 ಕೆಜಿಯಷ್ಟು ತೂಕ ಹೆಚ್ಚ್ಚಾಗಿದ್ದೆ. ನಂತರ ಯೋಗ, ಪಥ್ಯ ಮಾಡಿ ಈಗ ಮೊದಲಿನ ಆಕಾರಕ್ಕೆ ಮರಳಿದ್ದೇನೆ ಎನ್ನುತ್ತಾರೆ ಡೈಸಿ.
ಒಟ್ಟಿನಲ್ಲಿ ಯೋಗ, ಪಥ್ಯದಿಂದ ಅವರ ಸೌಂದರ್ಯ ಮತ್ತಷ್ಟು ಹೆಚ್ಚಿದೆಯಂತೆ. ಸರ್ಕಾರ್, ಗೊಲ್ ಮಾಲ್ ಮತ್ತು ಪಾರ್ಟ್ ನರ್ ಚಿತ್ರಗಳನ್ನು ನಿರ್ಮಿಸಿದ ಸಂಸ್ಥೆಯಿಂದ ಮೂರು ಚಿತ್ರಗಳಲ್ಲಿ ನಟಿಸಲು ಅವಕಾಶ ಬಂದಿದೆ. ದಕ್ಷಿಣದಲ್ಲೂ ಹಲವಾರು ಚಿತ್ರಗಳಲ್ಲಿ ನಟಿಸುವ ಅವಕಾಶ ಬಂದಿತ್ತು. ಆದರೆ ಚಿತ್ರಕತೆ ಇಷ್ಟವಾಗದ ಕಾರಣ ಒಪ್ಪಿಕೊಳ್ಳಲಿಲ್ಲ. ಉತ್ತಮ ಚಿತ್ರಕತೆ, ಸವಾಲೊಡ್ಡುವಂತಹ ಪಾತ್ರ ಬಂದರೆ ಖಂಡಿತ ನಟಿಸುತ್ತೇನೆ ಎಂಬುದು ಡೈಸಿ ಕೊಡುವ ಸ್ಪೈಸಿ ಉತ್ತರ.
(ದಟ್ಸ್ ಕನ್ನಡ ಚಿತ್ರವಾರ್ತೆ)