Don't Miss!
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- News RCB vs KKR: ಕ್ರಿಕೆಟ್ ಪ್ರೇಮಿಗಳೇ... ಪ್ರಯಾಣಿಕರೇ ರಸ್ತೆಗಿಳಿಯುವ ಮುನ್ನ ಒಮ್ಮೆ ಗಮನಿಸಿ
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ ಗೆ ನಿಸಾರ್ ಮನೆಯ ಬಿರಿಯಾನಿ ಊಟ
ರಾಜ್ ಬಗ್ಗೆ ಅಪಾರ ಅಭಿಮಾನ ಇಟ್ಟುಕೊಂಡವರು ನಿತ್ಯೋತ್ಸವ ಕವಿ ಡಾ.ಕೆ.ಎಸ್.ನಿಸಾರ್ ಅಹಮದ್. ಹಾಗೇ ರಾಜ್ ಗೆ ನಿಸಾರ್ ಬಗ್ಗೆ ಎಲ್ಲಿಲ್ಲದ ಪ್ರೀತಿ. ಕವಿ, ಕಲಾವಿದರ ಬಗ್ಗೆ ರಾಜ್ ಗೆ ಅಪಾರ ಗೌರವ. ಪರಸ್ಪರ ಇಬ್ಬರಲ್ಲೂ ಅಂಥ ನಿರ್ಮಲ ಸ್ನೇಹಭಾವ ಇತ್ತು. ರಾಜ್ ಕುಮಾರ್ ಅವರನ್ನು ತಮ್ಮ ಮನೆಯ ಊಟಕ್ಕೆ ಒಮ್ಮೆ ಆಹ್ವಾನಿಸಿದರು ನಿಸಾರ್.
ಘಮಭರಿತ ಬಿಸಿಬಿಸಿ ಬಿರಿಯಾನಿ ಊಟ ನಿಸಾರರ ಮನೆಯಲ್ಲಿ ರಾಜ್ ಗಾಗಿ ಸಿದ್ದವಾಗಿತ್ತು. ಮಾಂಸದ ಊಟದಲ್ಲಿ ಒಂದು ಕೈ ಮೇಲೆ ಎಂಬಂತೆ ಬಿರಿಯಾನಿಯನ್ನು ಅವತ್ತು ಚಪ್ಪರಿಸಿ ತಿಂದಿದ್ದರು ರಾಜ್. ಊಟ ಮುಗಿದ ಬಳಿಕ ಪಾರ್ವತಮ್ಮ ರಾಜ್ ಕುಮಾರ್ ಕೈತೊಳೆಯಲು ಹೋದರು.ಆದರೆ ರಾಜ್ ಕುಮಾರ್ ಮಾತ್ರ ಕೈತೊಳೆಯಲಿಲ್ಲ. ಎಲ್ಲರಿಗೂ ಆಶ್ಚರ್ಯ.
ಕಡೆಗೆ 'ಯಾಕ್ರೀ, ಕೈ ತೊಳೆಯಲಿಲ್ಲ?' ಎಂದು ಪಾರ್ವತಮ್ಮ ಕುತೂಹಲ ತಡೆಯಲಾಗದೆ ಕೇಳಿಯೇ ಬಿಟ್ಟರು.ಇದನ್ನು ಗಮನಿಸುತ್ತಿದ್ದ ನಿಸಾರ್ ಮನೆಯಲ್ಲಿದ್ದ ಎಲ್ಲರಿಗೂ ರಾಜ್ ಕುಮಾರ್ ಏನು ಹೇಳುತ್ತಾರೆ ಎಂಬುದನ್ನು ಕೇಳುವುದಕ್ಕೆ ಕಿವಿಗೊಟ್ಟರು. ನಿಸಾರರಿಗೆ ಒಂದು ರೀತಿ ಆತಂಕ. 'ಏನಾದರೂ ಊಟದಲ್ಲಿ ವ್ಯತ್ಯಾಸವಾಯಿತಾ?' ಎಂದು ಆಲೋಚಿಸುತ್ತಿದ್ದರು.
ಎಲ್ಲರೂ ತನ್ನತ್ತಲೇ ದೃಷ್ಟಿ ನೆಟ್ಟಿರುವುದನ್ನು ಗ್ರಹಿಸಿಕೊಂಡ ರಾಜ್ ಕುಮಾರ್ "ಪಾರ್ವತೀ, ಗೆಳೆಯ ನಿಸಾರ್ ನಮಗೆ ಅದ್ಭುತ ಬಿರಿಯಾನಿ ಊಟ ಮಾಡಿಸಿದ್ದಾರೆ. ನಾನು ಈಗಲೇ ಕೈ ತೊಳೆದು ಬಿಟ್ಟರೆ ಅದರ ಘಮ್ಮನೆಯ ಗಮ್ಮತ್ತನ್ನು ಕಳೆದುಕೊಂಡುಬಿಡುತ್ತೇನೆ. ಕಡೆಯ ಪಕ್ಷ ಅದರ ಸವಿಸವಿ ಊಟದ ಘಮಲು ಸಂಜೆವರೆಗಾದರೂ ಇರಲಿ" ಎನ್ನುತ್ತಾ ಮತ್ತೊಮ್ಮೆ ಕೈ ಮೂಸಿಕೊಂಡರು.ರಾಜ್ ಅವರ ಇಂಥ ರುಚಿಕಟ್ಟು ಊಟದ ಸವಿನೆನಪು ನಿಸಾರರಲ್ಲಿ ಶಾಶ್ವತವಾಗಿ ಉಳಿದು ಹೋಯ್ತು. ನಿಸಾರರಲ್ಲಿ ರಾಜ್ ಬಗ್ಗೆ ಇವತ್ತಿಗೂ ಧನ್ಯತಾ ಭಾವವಿದೆ. (ಕೃಪೆ: ಹಾಯ್ ಬೆಂಗಳೂರು)