Don't Miss!
- News RCB vs KKR: ಕ್ರಿಕೆಟ್ ಪ್ರೇಮಿಗಳೇ... ಪ್ರಯಾಣಿಕರೇ ರಸ್ತೆಗಿಳಿಯುವ ಮುನ್ನ ಒಮ್ಮೆ ಗಮನಿಸಿ
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Sports RCB vs KKR: ಚಿನ್ನಸ್ವಾಮಿಯಲ್ಲಿ ಮತ್ತೊಂದು ರೋಚಕ ಪಂದ್ಯ; ಸಂಭಾವ್ಯ ಆಡುವ 11ರ ಬಳಗ, ಲೈವ್ ಸ್ಟ್ರೀಮಿಂಗ್
- Automobiles Jonty Rhodes: ರಾಯಲ್ ಎನ್ಫೀಲ್ಡ್ ಬೈಕ್ಗಳಿಗೆ ಮನಸೋತ ದ.ಆಫ್ರಿಕಾ ಕ್ರಿಕೆಟರ್!
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡೈರೆಕ್ಟರ್ ಗುರು ಎಲ್ರಿ? ಅವರ 'ಸ್ಪೆಷಲ್' ಏನಾಯ್ತು?
ಚಿತ್ರ ನಿರ್ದೇಶಕ ಗುರು ಪ್ರಸಾದ್ ಎಲ್ರಿ? ಅವರ 'ಡೈರೆಕ್ಟರ್ಸ್ ಸ್ಪೆಷಲ್' ಎಲ್ಲಿಯವರೆಗೂ ಬಂತು? ಎಂಬ ಪ್ರಶ್ನೆಗಳು ಅವರ ಅಭಿಮಾನಿ ಬಳಗದಿಂದ ತೂರಿಬರುತ್ತಿವೆ. ಸದ್ಯಕ್ಕೆ 'ನಾಡೋಡಿಗಳ್' ಚಿತ್ರಕ್ಕೆ ಸಂಭಾಷಣೆ ಹೆಣೆಯುವಲ್ಲಿ ಗುರು ಬಿಜಿಯಾಗಿದ್ದಾರೆ. ಹಾಗೆಯೇ ಗುರು ಚಿತ್ರವೊಂದರ ಪೋಷಕ ಪಾತ್ರದಲ್ಲಿ ಮಿಂಚಲಿದ್ದಾರೆ.
ಪುನೀತ್ ರಾಜ್ ಕುಮಾರ್ ಮುಖ್ಯಭೂಮಿಕೆಯಲ್ಲಿರುವ ತಮಿಳಿನ 'ನಾಡೋಡಿಗಳ್' ಕನ್ನಡಕ್ಕೆ ರೀಮೇಕ್ ಆಗುತ್ತಿದೆ. ಇನ್ನೂ ಕನ್ನಡ ಶೀರ್ಷಿಕೆ ಇಡದ ಈ ಚಿತ್ರಕ್ಕೆ ಗುರು ಸಂಭಾಷಣೆ ಬರೆದುಕೊಟ್ಟಿದ್ದಾರೆ. ಏತನ್ಮಧ್ಯೆ ಆಗಸ್ಟ್ 27ರಂದು ಸೆಟ್ಟೇರಿದ 'ಡೈರೆಕ್ಟರ್ಸ್ ಸ್ಪೆಷಲ್' ಚಿತ್ರಕ್ಕೆ ಎರಡು ಹೊಸ ಮುಖಗಳನ್ನು ಆಯ್ಕೆ ಮಾಡಿದ್ದಾರೆ.
ಈ ಇಬ್ಬರು ಹೆಸರುಗಳನ್ನು ಮಾತ್ರ ಗುರು ಗುಟ್ಟಾಗಿಟ್ಟಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 99ನೇ ಚಿತ್ರ 'ಮೈಲಾರಿ'ಗೂ ಗುರು ಕೆಲಸ ಮಾಡಿದ್ದಾರೆ. ಇದಾದ ಬಳಿಕ ಅವರು ಕೋಮಲ್ ಅವರ 'ಕಳ್ ಮಂಜ' ಚಿತ್ರದಲ್ಲಿ ತೊಡಗಿಕೊಳ್ಳಲಿದ್ದಾರೆ.
ಇವೆಲ್ಲಾ ಕೆಲಸಗಳು ಮುಗಿದ ಬಳಿಕವಷ್ಟೆ ಅವರ 'ಡೈರೆಕ್ಟರ್ಸ್ ಸ್ಪೆಷಲ್'ಗೆ ಜೀವ ಬರಲಿದೆ. ಕಾರಣಾಂತರಗಳಿಂದ ಕೋಮಲ್ ಮತ್ತು ಗುರು ಸಂಬಂಧಗಳಿಗೆ ಕಲ್ಲು ಬಿದ್ದಿತ್ತು. 'ಕಳ್ ಮಂಜ' ರೂಪದಲ್ಲಿ ಈಗ ಎಲ್ಲವೂ ಸರಿಹೋಗಿದ್ದು ಈ ಚಿತ್ರದಲ್ಲಿ ಗುರು ಕಾಣಿಸಿಕೊಳ್ಳಲಿದ್ದಾರೆ ಎನ್ನುತ್ತವೆ ಮೂಲಗಳು.