Don't Miss!
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತ್ರಿವೇಣಿಗೆ ಬರಲಿದೆ ದಶಮುಖ: ಇಂದ್ರಜಿತ್ ಕಂಗಾಲು
ಇಂದ್ರಜಿತ್ ಲಂಕೇಶ್ ನಿರ್ದೇಶನ, ದಿಗಂತ್-ಚಾರ್ಮಿ ಜೋಡಿಯ 'ದೇವ್ ಸನ್ ಆಫ್ ಮುದ್ದೇ ಗೌಡ' ಚಿತ್ರವು ಈ ವಾರ ಮುಖ್ಯ ಚಿತ್ರಮಂದಿರ ತ್ರಿವೇಣಿಯಿಂದ ಎತ್ತಂಗಡಿಯಾಗಲಿದೆ. ನಂತರ ಸ್ವಪ್ನ ಚಿತ್ರಮಂದಿರದಲ್ಲಿ ಈ ಚಿತ್ರದ ಪ್ರದರ್ಶನ ಮುಂದುವರಿಯಲಿದೆ ಎಂಬ ಮಾಹಿತಿ ಗಾಂಧಿನಗರದಿಂದ ಬಂದಿದೆ. ತ್ರಿವೇಣಿಯಲ್ಲಿ 'ದಶಮುಖ' ಬಿಡುಗಡೆಯಾಗಲಿದೆ. ಪಕ್ಕದಲ್ಲಿ ಪ್ರದರ್ಶನವಾಗುತ್ತಿರುವ ತೆಲುಗು ಚಿತ್ರ 'ರಚ್ಚಾ' ಹಾಗೇ ಮುಂದುವರಿಯಲಿದೆ.
ಈ ವಿಷಯದಿಂದ ಇಂದ್ರಜಿತ್ ಲಂಕೇಶ್ ಭಾರೀ ಕಂಗಾಲಾಗಿದ್ದಾರೆ. ಒಂದೇ ವಾರಕ್ಕೆ ತಮ್ಮ ಚಿತ್ರ ಗಾಂಧಿನಗರದ ಮುಖ್ಯ ಚಿತ್ರಮಂದಿರದಿಂದ ಎತ್ತಂಗಡಿಯಾದರೆ ಹೇಗೆ ಎಂಬುದು ಅವರ ಚಿಂತೆಗೆ ಕಾರಣ. ಬೇರೆ ಥಿಯೇಟರುಗಳಲ್ಲಿ ದೇವ್ ಸನ್ ಆಫ್ ಮುದ್ದೇ ಗೌಡ ಚಿತ್ರದ ಪ್ರದರ್ಶನ ಮುಂದುವರಿಯಲಿದೆ. ಆದರೆ ಮುಖ್ಯ ಚಿತ್ರಮಂದಿರದಿಂದ ಕಿತ್ತುಹಾಕಿದರೆ ಹೇಗೆ ಎಂಬುದು ಅವರ ಪ್ರಶ್ನೆ, ತಮಗೆ ಅನ್ಯಾಯವಾಗಿದೆ ಎಂಬುದು ಅವರ ಅಳಲು.
ಈಗ ಪ್ರದರ್ಶನ ಕಾಣುತ್ತಿರುವ ರಚ್ಚಾ ಮತ್ತು ಭೀಮಾತೀರದಲ್ಲಿ ಚಿತ್ರಗಳಿಗೆ ಹೋಲಿಸಿದರೆ ತಮ್ಮ ಚಿತ್ರ ಸ್ಲೋ ಪಿಕಪ್ ಆಗುತ್ತಿದೆ ಎಂಬುದನ್ನು ಅವರು ಒಪ್ಪಿಕೊಂಡರಾದರೂ ಶೇರ್ ಚೆನ್ನಾಗಿ ಬರುತ್ತಿದೆ. ಮಲ್ಟಿಪ್ಲೆಕ್ಸ್ ಗಳಲ್ಲಿ ಒಂಟಿ ಥಿಯೇಟರುಗಳಿಗಿಂತ ಚೆನ್ನಾಗಿ ಓಡುತ್ತಿದೆ ಎಂಬ ಗುಟ್ಟನ್ನೂ ಬಿಚ್ಚಿಟ್ಟಿದ್ದಾರೆ ಇಂದ್ರಜಿತ್. ಬಹಳ ಬೇಸರದಲ್ಲಿರುವ ಇಂದ್ರಜಿತ್ ಮುಂದಿನ ನಡೆ ಏನು ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ. (ಒನ್ ಇಂಡಿಯಾ ಕನ್ನಡ)