Just In
Don't Miss!
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಟಾಟಾ ಆಲ್ಟ್ರೊಜ್ ಐಟರ್ಬೋ ಕಾರಿನ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್
- Sports
ಐಎಸ್ಎಲ್: ಪ್ಲೇ ಆಫ್ ನಿರೀಕ್ಷೆಯಲ್ಲಿ ಜೆಮ್ಷೆಡ್ಪುರ, ನಾರ್ಥ್ ಈಸ್ಟ್
- News
ಭಾರತದಲ್ಲಿ ಮೊದಲ ದಿನ ಕೊರೊನಾ ಲಸಿಕೆ ಪಡೆದವರೆಷ್ಟು ಮಂದಿ?
- Lifestyle
ಆರೋಗ್ಯಕರ ಋತುಚಕ್ರಕ್ಕೆ ಇಲ್ಲಿವೆ ಕೆಲವೊಂದು ಯೋಗಾಸನಗಳು
- Finance
ಬಜೆಟ್ 2021: MSME ವಲಯಕ್ಕೆ ಏನು ಸಿಗಬಹುದು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಾಜಶೇಖರ್ ನಿರ್ದೇಶನದಲ್ಲಿ ಕೋಮಲ್ ಹೊಸ ಚಿತ್ರ
ಈ ವರ್ಷ ಹಾಸ್ಯನಟ ಕೋಮಲ್ ಕುಮಾರ್ ಅವರ ಕೈಯಲ್ಲಿ ಇರುವಷ್ಟುಚಿತ್ರಗಳು ಬಹುಶಃ ಇನ್ಯಾವ ಕನ್ನಡ ನಟನ ಕೈಯಲ್ಲೂ ಇಲ್ಲ ಅನ್ನಿಸುತ್ತದೆ. ಮರ್ಯಾದೆ ರಾಮಣ್ಣ, ಅಶೋಕವನ, ವಾರೆ ವಾ, ಕಳ್ ಮಂಜ, ಸಿಹಿ ಮುತ್ತು, ಸ್ವಾಮೀಜಿ...ಹೀಗೆ ಪಟ್ಟಿ ಬೆಳೆಯುತ್ತದೆ.
ಈಗ ಮತ್ತೊಂದು ಚಿತ್ರಕ್ಕೆ ಕೋಮಲ್ ಸಹಿ ಹಾಕಿದ್ದಾರೆ. ಇನ್ನೂ ಹೆಸರಿಡಈ ಚಿತ್ರಕ್ಕೆ ಹಿರಿಯ ನಿರ್ದೇಶಕ ಎಂ ಎಸ್ ರಾಜಶೇಖರ್ ಆಕ್ಷನ್, ಕಟ್ ಹೇಳಲಿದ್ದಾರೆ. ಕುಪ್ಪುಸ್ವಾಮಿ ನಿರ್ಮಿಸುತ್ತಿರುವ ಚಿತ್ರ ಇದಾಗಿದೆ. ನಾಯಕಿ ಸೇರಿದಂತೆ ಚಿತ್ರದ ಉಳಿದ ಕಲಾವಿದರು ಹಾಗೂ ತಾಂತ್ರಿಕ ಬಳಗ ಆಯ್ಕೆ ಇನ್ನಷ್ಟೆ ನಡೆಯಬೇಕಾಗಿದೆ.
ನಿರ್ದೇಶಕ ರಾಜಶೇಖರ್ ಅವರು ಈ ಹಿಂದೆ ಅಣ್ಣಾವ್ರ 'ಅನುರಾಗ ಅರಳಿತು', 'ಧ್ರುವತಾರೆ', ರೆಬಲ್ ಸ್ಟಾರ್ ಅಂಬರೀಷ್ ಅವರ 'ಹೃದಯ ಹಾಡಿತು', 'ಗಂಡು ಸಿಡಿಗುಂಡು' ಹಾಗೂ 'ಮಣ್ಣಿನ ದೋಣಿ', ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 'ರಥಸಪ್ತಮಿ', 'ಮನಮೆಚ್ಚಿದ ಹುಡುಗಿ' ಚಿತ್ರಗಳನ್ನು ನಿರ್ದೇಶಿಸಿದ್ದರು. ಈಗ ಕೋಮಲ್ ಚಿತ್ರವನ್ನು ನಿರ್ದೇಶಿಸುವ ಮೂಲಕ ಮತ್ತೊಂದು ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ. ಡಿಸೆಂಬರ್ 15ರಿಂದ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ.