Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸೂರ್ಯಕಾಂತಿ'ಯ ತಾತನಾಗಿ ನಾಸಿರ್
ಬಿಡುಗಡೆಗೆ ಸಜ್ಜಾಗಿರುವ 'ಸೂರ್ಯಕಾಂತಿ' ಚಿತ್ರದಲ್ಲಿ ತಮಿಳು ಚಿತ್ರರಂಗದ ಪ್ರಸಿದ್ಧ ನಟ ನಾಸಿರ್ ಅಭಿನಯಿಸುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. 'ಆ ದಿನಗಳು' ಖ್ಯಾತಿಯ ಕೆ ಎಂ ಚೈತನ್ಯ 'ಸೂರ್ಯಕಾಂತಿ'ಯ ರೂವಾರಿ. ನಾಯಕ ನಟ ಚೇತನ್ ಗೆ ತಾತನಾಗಿ ನಾಸಿರ್ ಈ ಚಿತ್ರದಲ್ಲಿ ಕಾಣಿಸಲಿದ್ದಾರೆ. ವಯಸ್ಸಿನಲ್ಲಿ ನಾಸಿರ್ ಗಿಂತಲೂ ಹಿರಿಯರಾದ ಕಿಶೋರಿ ಬಲ್ಲಾಳ್ ನಾಸಿರ್ ಗೆ ಜೋಡಿ. ಇದು ಚಿತ್ರದ ವಿಶೇಷಗಳಲ್ಲಿ ಒಂದು.
ತಮಿಳು ಚಿತ್ರಗಳಲ್ಲಿ ತಮಗಿಂತಲೂ ಹಿರಿಯರಾದ ನಾಯಕ ನಟರಿಗೆ ನಾಸಿರ್ ಈಗಾಗಲೇ ತಂದೆಯಾಗಿ ಕಾಣಿಸಿಕೊಂಡಿದ್ದಾರೆ. ಕಿಶೋರಿ ಬಲ್ಲಾಳ್ ಗೆ ಜೊತೆಯಾಗಿ ನಟಿಸುತ್ತಿರುವುದರಲ್ಲಿ ತಪ್ಪೇನು ಇಲ್ಲ. ಆಟದಲ್ಲಿ ಇದೂ ಒಂದು ಭಾಗವಷ್ಟೆ ಎನ್ನುತ್ತಾರೆ ಚಿತ್ರದ ನಿರ್ದೇಶಕ ಚೈತನ್ಯ. ಸೂರ್ಯಕಾಂತಿಗೆ ನಾಸಿರ್ ಅವರನ್ನು ಕರೆತರಲು ಒಂದು ಸಣ್ಣ ಕಾರಣವೂ ಇದೆ.
ಆಗ ತಾನೆ ಚೈತನ್ಯರ 'ಆ ದಿನಗಳು' ಬಿಡುಗಡೆಯಾಗಿದ್ದ ಸಮಯ. ಬೆಂಗಳೂರಿನಲ್ಲಿ ನಾಸಿರ್ ಆ ಚಿತ್ರವನ್ನು ನೋಡಿದ್ದರು. ಚೈತನ್ಯ ಅವರಿಗೆ ಫೋನ್ ಮಾಡಿದ ನಾಸಿರ್ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರಂತೆ. ತಮ್ಮ ಮುಂದಿನ ಚಿತ್ರದಲ್ಲಿ ಅವಕಾಶ ಕೊಡಲು ಈ ಮೆಚ್ಚುಗೆ ಮಾತುಗಳನ್ನು ಆಡುತ್ತಿದ್ದಾರೆ ಎಂದು ಚೈತನ್ಯ ತಪ್ಪಾಗಿ ಅರ್ಥೈಸಿದ್ದರು.
ತಮ್ಮ ಪ್ರತಿಭೆಯನ್ನು ಗುರುತಿಸಿ ನಾಸಿರ್ ಫೋನ್ ಮಾಡಿದ್ದಾರೆ ಎಂಬುದು ನಂತರ ಚೈತನ್ಯರಿಗೆ ಗೊತ್ತಾಯಿತು. ಈ ದೂರವಾಣಿ ಸಂಭಾಷಣೆಯೇ ನಾಸಿರ್ ಅವರನ್ನು ಸೂರ್ಯಕಾಂತಿಗೆ ಕರೆತರಲು ಸಹಾಯಕವಾಗಿಯಿತು ಎನ್ನುತ್ತಾರೆ ಚೈತನ್ಯ. ಸಂಕ್ರಾಂತಿ ಹಬ್ಬಕ್ಕೆ (ಜ.14) ಸೂರ್ಯಕಾಂತಿ ತೆರೆಕಾಣಲಿದೆ.