Don't Miss!
- Automobiles ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜನವರಿಯಿಂದ ರಾಜ್ಯದಲ್ಲಿ ಚಿತ್ರ ಬಿಡುಗಡೆ ಬಂದ್
2010ರ ಜನವರಿ 1ರಿಂದ ರಾಜ್ಯದಲ್ಲಿ ಕನ್ನಡ ಸೇರಿದಂತೆ ಯಾವ ಭಾಷೆಯ ಚಿತ್ರಗಳನ್ನು ಬಿಡುಗಡೆ ಮಾಡದಂತೆ ಕರ್ನಾಟಕ ಚಲಚಿತ್ರ ನಿರ್ಮಾಪಕ ಸಂಘ ತೀರ್ಮಾನಿಸಿದೆ. ಶೇಕಡವಾರು ಪದ್ಧತಿಯಲ್ಲಿ ಚಿತ್ರಗಳನ್ನು ಬಿಡುಗಡೆ ಮಾಡಿ ಎಂಬುದು ನಿರ್ಮಾಪಕರ ಒತ್ತಾಯ. ಆದರೆ ಚಿತ್ರಮಂದಿರದ ಮಾಲೀಕರು ಈ ಪದ್ಧತಿಯನ್ನು ಸುತಾರಾಂ ಒಪ್ಪುತ್ತಿಲ್ಲ. ಬಾಡಿಗೆ ಪದ್ಧತಿಯಲ್ಲಿ ಚಿತ್ರಗಳನ್ನು ಬಿಡುಗಡೆ ಮಾಡುತ್ತೇವೆ ಎನ್ನುತ್ತಿದ್ದಾರೆ.
ಈ ಕಾರಣಕ್ಕೆ ಜನವರಿ 1ರಿಂದ ಚಿತ್ರಗಳ ಬಿಡುಗಡೆಯನ್ನು ತಡೆಹಿಡಿಯಲು ನಿರ್ಧರಿಸಿದ್ದೇವೆ. ಈ ಬಗ್ಗೆ ಕೂಲಂಕಷವಾಗಿ ಚರ್ಚಿಸಲು ನವೆಂಬರ್ 13ರಂದು ಸಂಘದ ಸರ್ವಸದಸ್ಯರ ಸಭೆಯನ್ನು ಕರೆಯಲಾಗಿದೆ. ಬೇರೆ ಭಾಷೆಯ ನಿರ್ಮಾಪಕರನ್ನು ಸಭೆಗೆ ಆಹ್ವಾನಿಸಲಾಗಿದ್ದ್ದು ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತದೆ ಎಂದು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಕೆ ಸಿ ಎನ್ ಚಂದ್ರಶೇಖರ್ ತಿಳಿಸಿದ್ದಾರೆ.
ಬಾಡಿಗೆ ಪದ್ಧತಿಯಲ್ಲಿ ಚಿತ್ರಗಳು ಬಿಡುಗಡೆಯಾದರೆ ನಿರ್ಮಾಪಕರಿಗೆ ನಷ್ಟವಾಗುತ್ತದೆ. ಹಾಗಾಗಿ ಶೇಕಡವಾರು ಪದ್ಧತಿಯಲ್ಲಿ ಚಿತ್ರಗಳನ್ನು ಬಿಡುಗಡೆ ಮಾಡಿ ಎಂಬುದು ನಿರ್ಮಾಪಕರ ಪ್ರಮುಖ ಅಹವಾಲು. ಇದಕ್ಕೆ ಚಿತ್ರಮಂದಿರದ ಮಾಲೀಕರು ಒಪ್ಪುತ್ತಿಲ್ಲ.
ಚಲನಚಿತ್ರ ವಾಣಿಜ್ಯ ಮಂಡಳಿ ಸಹ ನ.16ಕ್ಕೆ ಚಿತ್ರ ಪ್ರದರ್ಶಕರ ಸಭೆ ಕರೆದಿದೆ. ಶೇಕಡವಾರು ಪದ್ಧತಿಯಲ್ಲಿ ಚಿತ್ರಗಳನ್ನು ಬಿಡುಗಡೆ ಮಾಡುವಂತೆ ಪ್ರದರ್ಶಕರ ಬಳಿ ಮನವಿ ಮಾಡುತ್ತೇವೆ ಎಂದು ಕೆ ಎಫ್ ಸಿಸಿ ಅಧ್ಯಕ್ಷೆ ಡಾ.ಜಯಮಾಲಾ ಹೇಳಿದ್ದಾರೆ. ಒಟ್ಟಿನಲ್ಲಿ ಜನವರಿಯಲ್ಲಿ ತೆರೆಕಾಣಲಿರುವ ಸಾಲುಸಾಲು ಕನ್ನಡ ಚಿತ್ರಗಳ ಸ್ಥಿತಿ ಅಯೋಮಯವಾಗಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)