Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಳಹಸ್ತಿಯಲ್ಲಿ ಪ್ರಭು, ನಯನತಾರಾ ವಿಶೇಷ ಪೂಜೆ
ಆಂಧ್ರಪ್ರದೇಶದ ಕಾಳಹಸ್ತಿಯಲ್ಲಿ ತಾರಾ ಜೋಡಿಗಳಾದ ಪ್ರಭುದೇವ ಮತ್ತು ನಯನತಾರಾ ವಿಶೇಷ ಪೂಜೆ ಮತ್ತು ಯಜ್ಞವನ್ನು ಸಲ್ಲಿಸಿದ್ದಾರೆ. ತಮ್ಮ ಮದುವೆಗೆ ಎದುರಾಗಿರುವ ವಿಘ್ನಗಳನ್ನು ನಿವಾರಿಸಿಕೊಳ್ಳಲು ಅವರಿಬ್ಬರೂ ಕಾಳಹಸ್ತಿಗೆ ಭೇಟಿ ವಿಶೇಷ ಪೂಜೆಗಳನ್ನು ಮಾಡಿಸಿದ್ದಾಗಿ ಮೂಲಗಳು ತಿಳಿಸಿವೆ.
ಈಗಾಗಲೆ ಮೂವರು ಮಕ್ಕಳ ತಂದೆಯಾಗಿರುವ ಪ್ರಭುದೇವ ತಮ್ಮ ಪತ್ನಿಗೆ ವಿಚ್ಛೇದನ ನೀಡಲು ಮುಂದಾಗಿದ್ದಾರೆ. ಆದರೆ ಪ್ರಭುದೇವ ಪತ್ನಿ ರಾಮಲತಾ ಮಾತ್ರ ವಿಚ್ಛೇದನವನ್ನು ಒಪ್ಪುತ್ತಿಲ್ಲ. ಈಗಾಗಲೆ ಆಕೆ ನ್ಯಾಯಾಲಯದ ಮೆಟ್ಟಿಲೇರಿದ್ದು, ತಮ್ಮ ಪತಿ ಪ್ರಭುದೇವ ಅವರನ್ನು ಮರಳಿ ತಮಗೆ ದಕ್ಕುವಂತೆ ಮಾಡಿ ಎಂದು ಅರ್ಜಿ ಸಲ್ಲಿಸಿದ್ದಾರೆ.
ಈ ಸಂಬಂಧ ಚೆನ್ನೈ ಕೌಟುಂಬಿಕ ನ್ಯಾಯಾಲಯ ಈಗಾಗಲೆ ಪ್ರಭುದೇವ ಮತ್ತು ನಯನತಾರಾ ಅವರಿಗೆ ಸಮನ್ಸ್ ಜಾರಿ ಮಾಡಿದೆ. ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದೆ. ಒಂದು ವೇಳೆ ರಾಮಲತಾ ಪೊಲೀಸರಿಗೆ ದೂರು ನೀಡಿದರೆ ಯಾವುದೇ ಕ್ಷಣದಲ್ಲಿ ಪ್ರಭುದೇವ ಮತ್ತು ನಯನತಾರಾ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಒಟ್ಟಿನಲ್ಲಿ ಈ ಸಮಸ್ಯೆಯನ್ನು ಆದಷ್ಟು ನ್ಯಾಯಲಯದ ಹೊರಗೆ ಬಗೆಹರಿಸಿಕೊಳ್ಳಲು ಪ್ರಭುದೇವ ಚಿಂತಿಸಿದ್ದಾರೆ. ಯಾರಾದರು ಒಬ್ಬ ವಿವಿಐಪಿಯನ್ನು ಕರೆತಂದು ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿದ್ದಾರೆ. ಇದಕ್ಕೂ ಮುನ್ನ ಅವರು ಕಾಳಹಸ್ತಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪ್ರಭುದೇವ ಸಹೋದರರಾಜು ಸುಂದರಂ ಹಾಗೂ ಅವರ ಪೋಷಕರ ಬೆಂಬಲವೂ ಇದೆ ಎನ್ನಲಾಗಿದೆ.