Don't Miss!
- News 'ಚೆಂಬು' ಜಾಹೀರಾತಿನ ಮೂಲಕ ಮೋದಿ ಸರ್ಕಾರದ ವಿರುದ್ದ ನೇರ ದಾಳಿಗಿಳಿದ ಕಾಂಗ್ರೆಸ್
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ರಜನಿಕಾಂತ್ ಈಗ ಕನ್ನಡ ಕಾದಂಬರಿಯಲ್ಲಿ ಮಗ್ನ
ಸದಾ ಚಿತ್ರೀಕರಣ ಅದೂ ಇದೂ ಎಂದು ಬಿಜಿಯಾಗಿರುವ ಸಿನಿಮಾ ತಾರೆಗಳಲ್ಲಿ ಎಷ್ಟು ಮಂದಿಗೆ ಕಾದಂಬರಿ ಓದುವ ಹವ್ಯಾಸವಿದೆ. ಹುಡುಕಿದರೆ ಕೇವಲ ಬೆರಳೆಣಿಕೆಯಷ್ಟು ಮಂದಿ ಸಿಗಬಹುದು. ಅದರಲ್ಲಿ ನಟ ರಜನಿಕಾಂತ್ ಕೂಡ ಒಬ್ಬರು.ಅವರು ಈಗ ಕನ್ನಡ ಕಾದಂಬರಿಯೊಂದನ್ನು ಓದುತ್ತಿದ್ದಾರೆ. ಚಂದ್ರಶೇಖರ ಕಂಬಾರರ 'ಶಿಖರ ಸೂರ್ಯ'ದಲ್ಲಿ ಮಗ್ನರಾಗಿರುವ ರಜನಿ ಅವರಿಗೆ ಕಾದಂಬರಿಯಲ್ಲಿ ತುಂಬ ಹಿಡಿಸಿದೆಯಂತೆ.
ಈ ವಿಷಯವನ್ನು ಕಚಕಾತಂಕ (ಕರ್ನಾಟಕ ಚಲನಚಿತ್ರ ಕಾರ್ಮಿಕರ, ತಂತ್ರಜ್ಞರ, ಕಲಾವಿದರ)ಒಕ್ಕೂಟ ಅಧ್ಯಕ್ಷ ಹಾಗೂ ಹಿರಿಯ ನಟ ಅಶೋಕ್ ಇತ್ತೀಚೆಗೆ ಸುದ್ದಿಗಾರರಿಗೆ ತಿಳಿಸಿದರು. ಸುದೀಪ್ ಅಭಿನಯದ 'ಕೆಂಪೇಗೌಡ' ಚಿತ್ರದ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಅಶೋಕ್ ತಮ್ಮ ಹಾಗೂ ರಜನಿ ನಡುವಿನ ಸ್ನೇಹ ಸಂಬಂಧವನ್ನು ಹಂಚಿಕೊಂಡರು.
'ಸೂಪರ್' ಚಿತ್ರವನ್ನು ವೀಕ್ಷಿಸಲು ರಜನಿಕಾಂತ್ ಬೆಂಗಳೂರಿಗೆ ಬಂದಿದ್ದಾಗ ಅವರಿಗೆ ಕಂಬಾರರ 'ಶಿಖರ ಸೂರ್ಯ' ಕಾದಂಬರಿಯನ್ನು ಉಡುಗೊರೆಯಾಗಿ ಕೊಟ್ಟಿದ್ದರು. ಚೆನ್ನೈಗೆ ಹಿಂತಿರುಗಿದ ಬಳಿಕ ರಜನಿ ಪುಸ್ತಕವನ್ನು ಓದಲು ಕುಳಿತರಂತೆ. ಕೆಲವು ಪುಟಗಳನ್ನು ಓದುತ್ತಿದ್ದಂತೆ ಅವರಿಗೆ ಎಲ್ಲಿಲ್ಲದ ಆಸಕ್ತಿ ಬಂದಿದೆ.
ಕೂಡಲೆ ಅಶೋಕ್ ಅವರಿಗೆ ಕರೆ ಮಾಡಿ ತುಂಬಾ ಇಂಟರೆಸ್ಟಿಂಗ್ ಆಗಿದೆ ಎಂದಿದ್ದಾರೆ. ಒಂದು ಅದ್ಭುತ ಪುಸ್ತಕ ಕೊಟ್ಟಿದ್ದಕ್ಕೆ ತುಂಬ ಧನ್ಯವಾದಗಳು ಎಂದಿದ್ದಾರೆ. ಪುಸ್ತಕವನ್ನು ತುಂಬಾ ನಿಧಾನವಾಗಿ ಓದುತ್ತಿದ್ದೇನೆ. ಅದರಲ್ಲಿನ ಪ್ರತಿ ಪದವನ್ನೂ ಆಸ್ವಾದಿಸುತ್ತಿದ್ದೇನೆ ಎಂದು ಅಶೋಕ್ ಅವರಿಗೆ ರಜನಿ ತಿಳಿಸಿದ್ದಾಗಿ ಹೇಳಿದ್ದಾರೆ.
ಇಷ್ಟಕ್ಕೂ ಶಿಖರ ಸೂರ್ಯ ಕಾದಂಬರಿಯಲ್ಲಿ ಏನಿದೆ? ಎಚ್ ಎಸ್ ಶಿವಪ್ರಕಾಶ್ ಮುನ್ನುಡಿಯಲ್ಲಿ ಹೀಗೆ ಹೇಳಿದ್ದಾರೆ. "ಇಲ್ಲಿದೆ ದೈವ ಸೃಷ್ಟಿಯ ವಿಪುಲತೆ - ಷೇಕ್ಸ್ಪಿಯರನ್ನು ಕುರಿತು ಡ್ರೈಡನ್ ಹೇಳಿದ ಮಾತು ಕಂಬಾರರ ಈ ವಿಪುಲ ಕೃತಿಗೂ ಅನ್ವಯಿಸುತ್ತದೆ. ಇಂದಿನ ಗೋಳೀಕೃತ (ಗ್ಲೋಬಲೈಸ್ಡ್) ಜಗತ್ತಿನ ಒಣಗತ್ತುಗಳನ್ನು, ತಂತ್ರಜ್ಞಾನದ ಠೇಂಕಾರಗಳನ್ನು, ಈ ಮೃತ್ಯುವಿನ ಸ್ಥಿತಿಯಲ್ಲಡಗಿರುವ ಮರುಹುಟ್ಟಿನ ಅಸೀಮ ಸಾಧ್ಯತೆಗಳನ್ನು ಇಷ್ಟು ಸಮಗ್ರವಾಗಿ ಹಿಡಿದಿಡುವ ಕೃತಿಗಳು ನನಗೆ ಗೊತ್ತಿದ್ದ ಮಟ್ಟಿಗೆ ಸಾಹಿತ್ಯದಲ್ಲಿ ವಿರಳ."