Don't Miss!
- Lifestyle ಹೋಳಿ ದಿನ ಸ್ಕೂಟಿಯಲ್ಲಿ ಟೈಟಾನಿಕ್ ಪೋಸ್ ನೀಡಿ ದೊಪ್ಪೆಂದು ಬಿದ್ದ ಹುಡುಗಿಗೆ ಬಿತ್ತು ದುಬಾರಿ ಫೈನ್
- News ಮಳೆ ಬರದೇ ಇದ್ದರೆ ಮುಗೀತು ಕಥೆ!
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಂಗಪ್ಪ ಎಲ್ಲೂ ಹೋಗಿಲ್ಲ ಮಾತಿನ ಮನೆಯಲ್ಲಿ ಅವ್ನೆ
ರಮೇಶ್ ಅರವಿಂದ್ ಅಭಿನಯದ 'ರಂಗಪ್ಪ ಹೋಗ್ಬಿಟ್ನಾ' ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನ ಸುತ್ತಮುತ್ತ ಚಿತ್ರಕ್ಕೆ ಮೂವತ್ತೈದು ದಿನಗಳ ಚಿತ್ರೀಕರಣ ನಡೆದಿದೆ. ಸದ್ಯದಲ್ಲೆ ಶ್ರೀಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ಆರಂಭವಾಗಲಿದೆ.
ಎಲ್ಲಾ ಕಲಾವಿದ ಹಾಗೂ ತಂತ್ರಜ್ಞರ ಸಹಕಾರದಿಂದ ಚಿತ್ರದ ಚಿತ್ರೀಕರಣವನ್ನು ನಿಗದಿತ ವೇಳೆಗೆ ಪೂರ್ಣಗೊಳಿಸಲು ಸಾಧ್ಯವಾಯಿತೆಂದು ಚಿತ್ರದ ನಿರ್ದೇಶಕ ಎಂ.ಎಲ್.ಪ್ರಸನ್ನ ತಿಳಿಸಿದ್ದಾರೆ. ಕಾನ್ಫಿಡೆಂಟ್ ಗ್ರೂಪ್ಸ್ ಅರ್ಪಿಸುವ, ಮಹೇಶ್ ಕೊಠಾರಿ ಹಾಗೂ ಬಿ.ಎಚ್.ಬಾಷಾ ರವರ ಆಶೀರ್ವಾದದೊಂದಿಗೆ ಶಾಂತಾ ಎಂಟರ್ ಪ್ರೈಸಸ್ ಮೂಲಕ ಎನ್.ರವಿಕುಮಾರ್ ನಿರ್ಮಿಸುತ್ತಿರುವ ಚಿತ್ರ ಇದಾಗಿದೆ.
ಹಾಸ್ಯಪ್ರಧಾನ ಈ ಚಿತ್ರದಲ್ಲಿ ರಮೇಶ್ ಜೊತೆ ಸಂಜನಾ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರದ ತಾರಾಬಳಗದಲ್ಲಿ ರವಿಕಿರಣ್, ಮನದೀಪ್ರಾಯ್, ಸಿಹಿಕಹಿಚಂದ್ರು, ಸಾಧುಲಯೇಂದ್ರ ಮುಂತಾದವರಿದ್ದಾರೆ. ನಿರ್ದೇಶಕರೇ ಚಿತ್ರಕಥೆ, ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಎ.ಸಿ.ಮಹೇಂದರ್ ಛಾಯಾಗ್ರಹಣ ಮತ್ತು ಹರ್ಷ ರವರ ಸಂಕಲನವಿದೆ.