Don't Miss!
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- News Samsung: ಮಾರುಕಟ್ಟೆ ಗ್ರ್ಯಾಂಡ್ ಎಂಟ್ರಿ ನೀಡಿದೆ ನ್ಯೂ ಫೋನ್
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಂಗಪ್ಪ ಎಲ್ಲೂ ಹೋಗಿಲ್ಲ ಮಾತಿನ ಮನೆಯಲ್ಲಿ ಅವ್ನೆ
ರಮೇಶ್ ಅರವಿಂದ್ ಅಭಿನಯದ 'ರಂಗಪ್ಪ ಹೋಗ್ಬಿಟ್ನಾ' ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನ ಸುತ್ತಮುತ್ತ ಚಿತ್ರಕ್ಕೆ ಮೂವತ್ತೈದು ದಿನಗಳ ಚಿತ್ರೀಕರಣ ನಡೆದಿದೆ. ಸದ್ಯದಲ್ಲೆ ಶ್ರೀಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ಆರಂಭವಾಗಲಿದೆ.
ಎಲ್ಲಾ ಕಲಾವಿದ ಹಾಗೂ ತಂತ್ರಜ್ಞರ ಸಹಕಾರದಿಂದ ಚಿತ್ರದ ಚಿತ್ರೀಕರಣವನ್ನು ನಿಗದಿತ ವೇಳೆಗೆ ಪೂರ್ಣಗೊಳಿಸಲು ಸಾಧ್ಯವಾಯಿತೆಂದು ಚಿತ್ರದ ನಿರ್ದೇಶಕ ಎಂ.ಎಲ್.ಪ್ರಸನ್ನ ತಿಳಿಸಿದ್ದಾರೆ. ಕಾನ್ಫಿಡೆಂಟ್ ಗ್ರೂಪ್ಸ್ ಅರ್ಪಿಸುವ, ಮಹೇಶ್ ಕೊಠಾರಿ ಹಾಗೂ ಬಿ.ಎಚ್.ಬಾಷಾ ರವರ ಆಶೀರ್ವಾದದೊಂದಿಗೆ ಶಾಂತಾ ಎಂಟರ್ ಪ್ರೈಸಸ್ ಮೂಲಕ ಎನ್.ರವಿಕುಮಾರ್ ನಿರ್ಮಿಸುತ್ತಿರುವ ಚಿತ್ರ ಇದಾಗಿದೆ.
ಹಾಸ್ಯಪ್ರಧಾನ ಈ ಚಿತ್ರದಲ್ಲಿ ರಮೇಶ್ ಜೊತೆ ಸಂಜನಾ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರದ ತಾರಾಬಳಗದಲ್ಲಿ ರವಿಕಿರಣ್, ಮನದೀಪ್ರಾಯ್, ಸಿಹಿಕಹಿಚಂದ್ರು, ಸಾಧುಲಯೇಂದ್ರ ಮುಂತಾದವರಿದ್ದಾರೆ. ನಿರ್ದೇಶಕರೇ ಚಿತ್ರಕಥೆ, ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಎ.ಸಿ.ಮಹೇಂದರ್ ಛಾಯಾಗ್ರಹಣ ಮತ್ತು ಹರ್ಷ ರವರ ಸಂಕಲನವಿದೆ.