Don't Miss!
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾರ್ಮಿಕರ ದಿನದಂದು ಉಪೇಂದ್ರ ಸೂಪರ್ ವಿಜಯೋತ್ಸವ
ಹತ್ತು ವರ್ಷಗಳ ಬಳಿಕ ರಿಯಲ್ ಸ್ಟಾರ್ ಉಪೇಂದ್ರ ಆಕ್ಷನ್, ಕಟ್ನಲ್ಲಿ ಮೂಡಿಬಂದ 'ಸೂಪರ್' ಚಿತ್ರ ಶತಕ ಪೂರೈಸಿ ಮುನ್ನುಗ್ಗುತ್ತಿದೆ. ಈ ಸಂಭ್ರಮವನ್ನು ಚಿತ್ರದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆಸಿದ್ದಾರೆ. ಕಾರ್ಮಿಕರ ದಿನಾಚರಣೆಯಂದು (ಮೇ.1) ಅರಮನೆ ಮೈದಾನದಲ್ಲಿ ಗಾಯತ್ರಿ ವಿಹಾರದಲ್ಲಿ 'ಸೂಪರ್' ಶತದಿನೋತ್ಸವ ಸಂಭ್ರಮ ನಡೆಯಲಿದೆ.
ಈ ಅದ್ದೂರಿ ಕಾರ್ಯಕ್ರಮದ ಸಂಪೂರ್ಣ ಮಾಹಿತಿ ಶೀಘ್ರದಲ್ಲೆ ಬಿಡುಗಡೆಯಾಗಲಿದ್ದು ಚಿತ್ರರಂಗದ ಹಲವರು ಗಣ್ಯರು ಭಾಗವಹಿಸಲಿದ್ದಾರೆ. ಸೂಪರ್ ಚಿತ್ರದ ತೆಲುಗು ಹಾಗೂ ತಮಿಳು ಭಾಷೆಗೂ ಡಬ್ ಆಗಿದ್ದು ಅಲ್ಲಿನ ಕೆಲವು ತಾರೆಗಳನ್ನೂ ಕರೆಸುವ ಪ್ರಯತ್ನವನ್ನು ರಾಕ್ ಲೈನ್ ಮಾಡುತ್ತಿದ್ದಾರೆ. ಈ ಹಿಂದೆ ಏಪ್ರಿಲ್ನಲ್ಲಿ ಶತದಿನೋತ್ಸವ ಆಚರಿಸಲಾಗುತ್ತದೆ ಎಂದು ಹೇಳಲಾಗಿತ್ತು.
ಇದೇ ಸಂದರ್ಭದಲ್ಲಿ ರಾಕ್ ಲೈನ್ ವೆಂಕಟೇಶ್ ತಮ್ಮ ಚಿತ್ರಗಳಲ್ಲಿ ಕೆಲಸ ಮಾಡಿದ ನಿರ್ದೇಶಕರು, ನಟ ನಟಿಯರು, ಸಂಗೀತ ನಿರ್ದೇಶಕರು ಹಾಗೂ ಛಾಯಾಗ್ರಾಹಕರನ್ನು ಅಭಿನಂದಿಸಲಿದ್ದಾರೆ. ಒಟ್ಟಾರೆಯಾಗಿ ಉಪೇಂದ್ರ ಅಭಿಮಾನಿಗಳಿಗೆ ಈ ಕಾರ್ಯಕ್ರಮ ಮರಯಲಾಗದ ಅನುಭವ ನೀಡಲಿದೆ.