Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಂತಚೋರನ ಪತ್ನಿಯಾಗಿ ದಂತದಗೊಂಬೆ ವಿಜಯಲಕ್ಷ್ಮಿ
ನರಹಂತಕ, ದಂತಚೋರ, ಕಾಡುಗಳ್ಳ ವೀರಪ್ಪನ್ ಕುಖ್ಯಾತ ಜೀವನ ಚರಿತ್ರೆಯನ್ನು 'ಅಟ್ಟಹಾಸ' ಚಿತ್ರದ ಮೂಲಕ ಎಎಂಆರ್ ರಮೇಶ್ ಬೆಳ್ಳಿತೆರೆಗೆ ತರುತ್ತಿರುವುದು ಗೊತ್ತೆ ಇದೆ. ಪ್ರಬುದ್ಧ ನಟ ಕಿಶೋರ್ 'ವೀರಪ್ಪನ್' ಆಗಿ ಬೆಳ್ಳಿಪರದೆ ಮೇಲೆ ಅಟ್ಟಹಾಸ ಮೆರೆಯಲಿದ್ದಾರೆ. ಆದರೆ ವೀರಪ್ಪನ್ ಪತ್ನಿ ಮುತ್ತುಲಕ್ಷ್ಮಿ ಪಾತ್ರ ಯಾರು ಪೋಷಿಸಲಿದ್ದಾರೆ?
ಈ ಪ್ರಶ್ನೆಗೆ ಈಗ ಉತ್ತರ ಬಹುತೇಕ ಸಿದ್ಧವಾಗಿದೆ. ತಮಿಳಿನ ಅರ್ಧ ಡಜನ್ ಚಿತ್ರಗಳಲ್ಲಿ ನಟಿಸಿರುವ ವಿಜಯಲಕ್ಷ್ಮಿ ಎಂಬ ದಂತದ ಗೊಂಬೆಯನ್ನು ಮುತ್ತುಲಕ್ಷ್ಮಿ ಪಾತ್ರಕ್ಕೆ ಆಯ್ಕೆ ಮಾಡಲು ಮುಂದಾಗಿದ್ದಾರೆ ರಮೇಶ್. ಈಗಾಗಲೆ ಆಕೆಯನ್ನು ಸಂಪರ್ಕಿಸಿದ್ದು ಮಾತುಕತೆ ನಡೆಯುತ್ತಿದೆ.
'ರೈಸ್ ಅಂಡ್ ಫಾಲ್' ಎಂಬುದು ಅಟ್ಟಹಾಸ ಚಿತ್ರದ ಅಡಿಬರಹ. ಎಸ್ಟಿಎಫ್ ಮುಖ್ಯಸ್ಥ ವಿಜಯ್ ಕುಮಾರ್ ಪಾತ್ರದಲ್ಲಿ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಕಾಣಿಸಲಿದ್ದು ವೀರಪ್ಪನ್ನನ್ನು ಮುಗಿಸಲಿದ್ದಾರೆ. ಡಾ.ರಾಜ್ ಅಪಹರಣ, 108 ದಿನಗಳ ಒತ್ತೆ, ಬಿಡುಗಡೆ, ಆನಂತರದ ಬೆಳವಣಿಗೆಗಳ ಮೇಲೆ ಚಿತ್ರ ಬೆಳಕು ಚೆಲ್ಲಲಿದೆ. (ದಟ್ಸ್ಕನ್ನಡ ಸಿನಿವಾರ್ತೆ)