Don't Miss!
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್ ಬಗ್ಗೆ ಭಾರತದ ಮಾಜಿ ಆಟಗಾರರ ಅಭಿಪ್ರಾಯ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- News ಧಾರವಾಡ; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್, ಕಣದಲ್ಲಿ 17 ಮಂದಿ
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bangalore Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Automobiles ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣು ಯಜಮಾನನಿಗೆ ಬಸವನಗುಡಿಯಲ್ಲಿ ಪುಷ್ಪ ನಮನ
ಅಗಲಿದ ನಟ ಸಾಹಸಸಿಂಹ ವಿಷ್ಣುವರ್ಧನ್ ಅವರ ವೈಕುಂಠ ಸಮಾರಾಧನೆಯನ್ನು (13ನೇ ದಿನ) ಅವರ ಕುಟುಂಬ ವರ್ಗ ಬಸವನಗುಡಿ ಧರ್ಮಸ್ಥಳ ಮಂಜುನಾಥ ಕಲ್ಯಾಣ ಮಂಟಪದಲ್ಲಿ ನೆರವೇರಿಸಿತು. ಬೆಳಿಗ್ಗೆ ಏಳು ಗಂಟೆಗೆ ಪೂಜಾ ಪುನಸ್ಕಾರ ನೆರವೇರಿಸಿದ ವಿಷ್ಣು ಕುಟುಂಬ ವರ್ಗ ಪುಷ್ಪ ನಮನ ಸಲ್ಲಿಸಿತು. ವಿಷ್ಣುಗೆ ದತ್ತು ಮಗನಂತಿದ್ದ ಶ್ರೀಧರ್ ಪೂಜಾ ವಿಧಿವಿಧಾನಗಳನ್ನುನೆರವೇರಿಸಿದರು.
ಚಿತ್ರರಂಗದ ಅನೇಕ ಕಲಾವಿದರು, ತಂತ್ರಜ್ಞರು ಮತ್ತು ನಿರ್ದೇಶಕರು ಆಗಮಿಸಿ ವಿಷ್ಣು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಟ ಮತ್ತು ಅಳಿಯ ಅನಿರುದ್ಧ ಕಲ್ಯಾಣ ಮಂಟಪದ ಬಾಗಿಲ ಬಳಿ ನಿಂತು ಎಲ್ಲರನ್ನೂ ಆತ್ಮೀಯವಾಗಿ ಬರ ಮಾಡಿಕೊಂಡರು. ವಿಷ್ಣು ಪತ್ನಿ ಭಾರತಿ ಆತ್ಮ ಸ್ಥೈರ್ಯ ಕಳೆದುಕೊಳ್ಳದೆ ಬಂದವರನ್ನು ಪ್ರೀತಿಯಿಂದ ಮಾತನಾಡಿಸಿ ಯಜಮಾನನಿಗೆ ಪೂಜಾ ಪುನಸ್ಕಾರಗಳನ್ನು ನೆರವೇರಿಸಿದರು.
ನಟ ಶಿವರಾಜ್ ಕುಮಾರ್ ಮಾತನಾಡುತ್ತಾ, ವಿಷ್ಣು ಅವರು ನಮ್ಮನ್ನು ಬಿಟ್ಟು ಎಲ್ಲೂ ಹೋಗಿಲ್ಲ. ಅವರ ಆತ್ಮ ಇಲ್ಲೇ ಎಲ್ಲೋ ಇದ್ದೇ ಇರುತ್ತದೆ.ಅಪ್ಪಾಜಿ ಅವರು ಹಾಗೂ ವಿಷ್ಣು ಒಟ್ಟಿಗೆ ಇರುತ್ತಾರೆ. ವಿಷ್ಣು ಶಾಂತಿ ಪ್ರಿಯರು, ಸ್ನೇಹ ಜೀವಿ ಎಂದು ಶಿವರಾಜ್ ಕುಮಾರ್ ಬಣ್ಣಿಸಿದರು.
ದ್ವಾರಕೀಶ್, ಶಿವರಾಂ, ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್, ಜಯಮಾಲ, ಸಿ ಆರ್ ಸಿಂಹ, ಅಶೋಕ್, ಸಾಹುಕಾರ್ ಜಾನಕಿ,ದೊಡ್ಡಣ್ಣ, ರಾಕ್ ಲೈನ್ ವೆಂಕಟೇಶ್, ರಮೇಶ್ ಭಟ್, ಸುಧಾ ರಾಣಿ, ವಿನೋದ್ ರಾಜ್, ಸಂಸದ ಅನಂತ್ ಕುಮಾರ್ ಸೇರಿದಂತೆ ಹಲವಾರು ಗಣ್ಯರು ಆಗಮಿಸಿದ್ದರು.
ವಿಷ್ಣು ಅಭಿಮಾನಿಗಳು ನ್ಯಾಷನಲ್ ಕಾಲೇಜ್ ಆವರಣದಲ್ಲಿ ರಕ್ತದಾನ ಶಿಬಿರ ನಡೆಸಿದರು. ವಿಷ್ಣು ಕಟ್ಟಿ ಬೆಳೆಸಿದ 'ಸ್ನೇಹಲೋಕ' ತಂಡದ ಗೆಳೆಯರು ವೈಕುಂಠ ಸಮಾರಾಧನೆಯನ್ನು ನೆರವೇರಿಸಿದರು. ಸಾವಿರಾರು ಅಭಿಮಾನಿಗಳು ಆಗಮಿಸಿ ವಿಷ್ಣು ಭಾವಚಿತ್ರಕ್ಕೆ ಹೂಹಾರ ಹಾಕಿ ಶ್ರದ್ಧಾಂಜಲಿ ಅರ್ಪಿಸಿದರು. ಕೆಲವು ವಿಷ್ಣು ಅಭಿಮಾನಿಗಳು ವಿಷ್ಣು ಭಾವಚಿತ್ರದ ಮುಂದೆ ಕಣ್ಣೀರಿಡುತ್ತಿದ್ದ ದೃಶ್ಯ ಮನಕಲಕುವಂತಿತ್ತು.