Don't Miss!
- News 5 ವರ್ಷಗಳಲ್ಲಿ ಕರ್ನಾಟಕ ಸಂಸದರ ಸಾಧನೆ ಏನು? ಅಧ್ಯಯನ ಹೇಳೋದೇನು?
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸರ್ಕಾರದ ವಿರುದ್ಧ ಪಾರ್ವತಮ್ಮ ರಾಜ್ಕುಮಾರ್ ಕಿಡಿ!
ಬೆಂಗಳೂರು : ಡಾ. ರಾಜ್ ಅಗಲಿ ಶುಕ್ರವಾರ(ಏ.12)ಕ್ಕೆ ಒಂದು ವರ್ಷ. ಆದರೆ ನಗರದ ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್ ಸಮಾಧಿಯನ್ನು ಸ್ಮಾರಕವಾಗಿ ಅಭಿವೃದ್ಧಿ ಪಡಿಸುವ ಕೆಲಸ ಇನ್ನೂ ಆರಂಭಗೊಂಡಿಲ್ಲ.
ನಾಡಿನ ಹಿರಿಯ ಕಲಾವಿದರ ಬಗ್ಗೆ ಸರ್ಕಾರ ಅಸಡ್ಡೆ ತೋರುತ್ತಿದೆ ಎಂಬುದು ರಾಜ್ ಅಭಿಮಾನಿಗಳು ಮತ್ತು ಅವರ ಕುಟುಂಬದವರ ದೂರು. ಈ ಬಗ್ಗೆ ಪಾರ್ವತಮ್ಮ ರಾಜ್ಕುಮಾರ್ ಸುದ್ದಿಗಾರರ ಬಳಿ ಮಾತನಾಡುತ್ತ, ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರದ ವಿರುದ್ಧ ಕಿಡಿಕಾರಿದರು.
ಮುಖ್ಯಮಂತ್ರಿ ಹೆಚ್. ಡಿ. ಕುಮಾರ ಸ್ವಾಮಿ, ರಾಜ್ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣಕ್ಕೆ 10 ಕೋಟಿ ನೀಡುವುದಾಗಿ ಘೋಷಿಸಿದ್ದರು. ನಂತರ ಬಜೆಟ್ನಲ್ಲಿ ಉಪಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, 3 ಕೋಟಿ ಮಂಜೂರು ಮಾಡಿದ್ದರು. ಆದರೆ ಯಾವುದೂ ಕಾರ್ಯರೂಪಕ್ಕೆ ಇಳಿದಿಲ್ಲ. ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ ಬೇಸರ ತಂದಿದೆ ಎಂದು ಪಾರ್ವತಮ್ಮ ಹೇಳಿದರು.
ರಾಜ್ ಸಮಾಧಿ ಸ್ಮಾರಕದ ಕೆಲಸವನ್ನು ಇನ್ನು 6 ತಿಂಗಳಲ್ಲಿ ಪೂರೈಸುವುದಾಗಿ ಮುಖ್ಯಮಂತ್ರಿಗಳು, ರಾಜ್ ಅವರ 11ನೇ ದಿನದ ತಿಥಿ ಸಂದರ್ಭದಲ್ಲಿ ಹೇಳಿದ್ದರು. ಆದರೆ ಒಂದು ಇಂಚು ಸಹ ಕೆಲಸ ಆಗಿಲ್ಲ. ಸರ್ಕಾರ ನಮ್ಮ ಕೈಲಿ ಆಗುವುದಿಲ್ಲ ಎಂದು ಬೇಕಿದ್ದರೆ ಕೈ ತೊಳೆದು ಕೊಳ್ಳಲಿ. ಈ ರೀತಿಯ ಅಸಡ್ಡೆ ತೋರಿಸುವುದು ನಿಜಕ್ಕೂ ಶೋಚನೀಯ ಸಂಗತಿ ಎಂದು ಪಾರ್ವತಮ್ಮ ತೀವ್ರವಾದ ದುಃಖದಿಂದ ಹೇಳಿದರು.
ಸಮಾಧಿ ಸುತ್ತ 5 ಎಕರೆ ಭೂಮಿ ಕೇಳಿ ಅಧಿಕೃತವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೆವು. ರಾಜ್ ಅವರಿಗೆ ಸಂಬಂಧಿಸಿದ ಪುಸ್ತಕಗಳು, ಸಂಗೀತ ಉಪಕರಣಗಳು, ರಾಜ್ ನೆನಪಿನ ಚಿತ್ರಗಳು ಹೀಗೆ ಚಿತ್ರರಂಗಕ್ಕೆ ರಾಜ್ ಅವರ ಕೊಡುಗೆಯನ್ನು ಇಂದಿನ ಜನತೆಗೆ ಹಾಗೂ ಮುಂದಿನ ಜನರಿಗೂ ಸಾದರಪಡಿಸುವ ಉದ್ದೇಶವನ್ನು ನಾವು ಹೊಂದಿದ್ದೇವೆ. ಆದರೆ ಸರ್ಕಾರ ನಮ್ಮ ಆಶಯಕ್ಕೆ ಬೆಂಬಲ ನೀಡುತ್ತಿಲ್ಲ. ರಾಜ್ ಸ್ಮಾರಕ ಸಮಿತಿಯ ಅಧ್ಯಕ್ಷರೂ ಆದ ಮುಖ್ಯಮಂತ್ರಿಗಳು, ಸಮಿತಿಯ ಯಾವ ಸಭೆಗೂ ಹಾಜರಾಗಿಲ್ಲ ಎಂದು ಪಾರ್ವತಮ್ಮ ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)