Don't Miss!
- News Gadag: ಕಾಂಗ್ರೆಸ್ ಸರ್ಕಾರದಲ್ಲಿ ಕೊಲೆಗಡುಕರಿಗೆ ರಾಜ ಮರ್ಯಾದೆ: ಮಾಜಿ ಸಿಎಂ
- Automobiles ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಾಂಡೆ ನೇತೃತ್ವದಲ್ಲಿ ಸಮಿತಿ ನೇಮಕ
ಬೆಂಗಳೂರು: ಕನ್ನಡ ಚಲನಚಿತ್ರ ರಂಗದಲ್ಲಿನ ಸಮಸ್ಯೆಗಳ ಅಧ್ಯಯನಕ್ಕೆ ರಾಜ್ಯ ಸರಕಾರ ಬುಧವಾರ ಸಮಿತಿಯಾಂದನ್ನು ರಚಿಸಿದೆ.
ರಾಜ್ಯಸರಕಾರದ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಕೆ.ಆರ್.ಪಾಂಡೆ ಅಧ್ಯಕ್ಷತೆಯಲ್ಲಿ ಸಮಿತಿ ಕಾರ್ಯನಿರ್ವಹಿಸಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವ ಸಿದ್ಧರಾಮಯ್ಯ ಹೇಳಿದ್ದಾರೆ.
ಸಿನಿಮಾ ಲೋಕದ ಸಮಸ್ಯೆಗಳು ಹಾಗೂ ಕನ್ನಡ ಚಿತ್ರರಂಗ ಎದುರಿಸುತ್ತಿರುವ ಸವಾಲುಗಳನ್ನು ಸಮಿತಿ ಆಧ್ಯಯನ ನಡೆಸಿ, ಸರಕಾರಕ್ಕೆ ತ್ವರಿತವಾಗಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಚಿತ್ರರಂಗದ ಪ್ರಗತಿಗೆ ಪೂರಕವಾಗುವಂತೆ ಸರಕಾರ ನೀತಿ ರೂಪಿಸಲಿದೆ ಎಂದು ಸಿದ್ಧರಾಮಯ್ಯ ಸುದ್ದಿಗಾರಿಗೆ ತಿಳಿಸಿದ್ದಾರೆ.
ನಿರ್ಮಾಪಕರು, ನಿದೇಶಕರು, ಚಿತ್ರವಿತರಕರು ಮತ್ತಿತರ ಗಣ್ಯರನ್ನು ಸಮಿತಿ ಒಳಗೊಂಡಿರುತ್ತದೆ. ಚಿತ್ರರಂಗದ ಬಹುದಿನಗಳ ಬೇಡಿಕೆಗೆ ಸರಕಾರ ಸ್ಪಂದಿಸುತ್ತಿದೆ ಎಂದಿದ್ದಾರೆ.
ಮನರಂಜನಾ ತೆರಿಗೆ ಹೆಚ್ಚಳ, ಚಿತ್ರಮಂದಿರಗಳ ಕಿರಿಕಿರಿ, ಪರಭಾಷಾ ಚಿತ್ರಗಳ ಹಾವಳಿ ಸೇರಿದಂತೆ ಅನೇಕ ಸಮಸ್ಯೆಗಳನ್ನು ಬಿಂಬಿಸಿ ಸರಕಾರದ ಗಮನ ಸೆಳೆಯಲು ಸೋಮವಾರ (ಆ.9) ಕನ್ನಡ ಚಿತ್ರೋದ್ಯಮ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ ಬೆನ್ನಲ್ಲಿಯೇ ಸರಕಾರ ಸಮಿತಿಯನ್ನು ರಚಿಸಿದೆ.
ಪಾರ್ವತಮ್ಮ ರಾಜ್ಕುಮಾರ್, ಎಸ್.ವಿ.ರಾಜೇಂದ್ರಸಿಂಗ್ ಬಾಬು, ಜೋಸೈಮನ್ ಸಮಿತಿಯಲ್ಲಿ ಚಿತ್ರೋದ್ಯಮವನ್ನು ಪ್ರತಿನಿಧಿಸಲಿರುವ ಪ್ರಮುಖರು ಎಂದು ಗಾಂಧಿನಗರದ ಮೂಲಗಳು ತಿಳಿಸಿವೆ.