Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರವಿ ಬೆಳಗೆರೆ ವಕೀಲ! ಸುಧಾಮೂರ್ತಿ ಜಡ್ಜ್!!
ಪ್ರತಿಷ್ಠಿತರನ್ನು, ಗಣ್ಯರನ್ನು ಕಿರುತೆರೆಯ ಧಾರಾವಾಹಿಗಳಿಗೆ ಕರೆತರುವ ಅಭ್ಯಾಸ ಮಾಡಿಸಿದ್ದು, ಟಿ.ಎನ್.ಸೀತಾರಾಂ. ಈ ಸಂಪ್ರದಾಯವನ್ನು ನಿರ್ದೇಶಕ ವಿನು ಬಳಂಜ ಮುಂದುವರೆಸಿದ್ದಾರೆ. ಆ ಪರಿಣಾಮವೇ, ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ, ಕಿರುತೆರೆಗಾಗಿ ಬಣ್ಣ ಹಚ್ಚಲಿದ್ದಾರೆ.
ಈ ಟಿ.ವಿ ಕನ್ನಡ ಚಾನೆಲ್ನಲ್ಲಿ ಸೋಮವಾರದಿಂದ ಶುಕ್ರವಾರದ ತನಕ 9.30ರಿಂದ 10ಗಂಟೆ ತನಕ ಪ್ರಸಾರವಾಗುವ ‘ಪ್ರೀತಿ ಇಲ್ಲದ ಮೇಲೆ’ ಧಾರಾವಾಹಿಯಲ್ಲಿ ಅವರು ಅಭಿನಯಿಸಲಿದ್ದಾರೆ. ನ್ಯಾಯಾಧೀಶೆಯ ಪಾತ್ರವನ್ನು ಅವರು ನಿರ್ವಹಿಸಲಿದ್ದು, ಈ ಸಂಬಂಧದ ಮಾತುಕತೆ ಫಲಿಸಿದೆ.
ಅತಿಯಾದ ಮೇಕಪ್ ಬೇಡ, ಭಾನುವಾರ ಮಾತ್ರ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತೇನೆ. ನಟನೆ ಹೊಸತು, ಹೀಗಾಗಿ ತಪ್ಪುಗಳ ಸಹಿಸಿಕೊಳ್ಳಬೇಕು ಎಂಬ ಷರತ್ತುಗಳನ್ನು ಹಾಕಿರುವ ಸುಧಾ ಮೂರ್ತಿ, ಅಂತಿಮವಾಗಿ ನಟಿಸಲು ಒಪ್ಪಿದ್ದಾರೆ. ಈ ಧಾರಾವಾಹಿಯಲ್ಲಿ ನಟ ಅನಂತನಾಗ್ ಮುಖ್ಯಪಾತ್ರದಲ್ಲಿದ್ದಾರೆ.
ರವಿ ಬೆಳಗೆರೆ ಇನ್ನೊಂದು ಅವತಾರ! : ‘ಮುಕ್ತ’ ಧಾರಾವಾಹಿಯಲ್ಲಿ ನ್ಯಾಯಾಧೀಶರ ಪಾತ್ರದಲ್ಲಿ ಮಿಂಚಿದ್ದ ಪತ್ರಕರ್ತ ರವಿಬೆಳಗೆರೆಗೆ ಸಿನಿಮಾವೊಂದರಲ್ಲಿ ವಕೀಲನ ಪಾತ್ರ ಸಿಕ್ಕಿದೆಯಂತೆ. ಚಿತ್ರದ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.