Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 11ನೇ ಪುಣ್ಯ ಸ್ಮರಣೆ
ಕನ್ನಡದ ಮೇರು ನಟ, ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 11ನೇ ಪುಣ್ಯತಿಥಿ ಆಚರಿಸಲಾಗುತ್ತಿದೆ. ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವ ವಿಷ್ಣುದಾದಾ ಅಗಲಿ ಇಂದಿಗೆ 11 ವರ್ಷಗಳು ಕಳೆದಿವೆ. ಆದರೂ ವಿಷ್ಣು ಕನ್ನಡ ಚಿತ್ರಪ್ರಿಯರ ಮನದಲ್ಲಿ ಇಂದಿಗೂ ಜೀವಂತವಾಗಿದ್ದಾರೆ.
2009 ಡಿಸೆಂಬರ್ 30 ಕನ್ನಡ ಚಿತ್ರರಂಗದ ಪಾಲಿನ ಕರಾಳದಿನ. ಅದ್ಭುತ ಸಿನಿಮಾಗಳನ್ನು ಮಾಡುತ್ತ ಅಭಿಮಾನಿಗಳನ್ನು ರಂಜಿಸುತ್ತಿದ್ದ ವಿಷ್ಣು ದಾದಾ ಮರೆಯಾದ ದಿನವಿದು. 11ವರ್ಷಗಳ ಹಿಂದೆ ಇದೇ ದಿನ ಇಡೀ ಚಿತ್ರರಂಗ ಶೋಕಸಾಗರದಲ್ಲಿ ಮುಳುಗಿತ್ತು. ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅನಾಥಮಾಡಿ, ವಿಷ್ಣುದಾದಾ ಬಾರದ ಲೋಕಕ್ಕೆ ಹೊರಟು ಹೋಗಿದ್ದರು.
ಸಾಹಸಿಂಹ ಮರೆಯಾಗಿ11 ವರ್ಷಗಳು ಕಳೆದಿವೆ. ಇಂದು ಅವರ ಪುಣ್ಯ ಸ್ಮರಣೆ. ಅಭಿಮಾನಿಗಳು ವಿಷ್ಣುವರ್ಧನ್ ಸಮಾಧಿ ಇರುವ ಅಭಿಮಾನ್ ಸ್ಟುಡಿಯೋಗೆ ಬಂದು ನೆಚ್ಚಿನ ನಟನ ಸಮಾಧಿಗೆ ನಮನ ಸಲ್ಲಿಸಲಿದ್ದಾರೆ. ಸಮಾಧಿಗೆ ಹೂವಿನಿಂದ ಅಲಂಕಾರ ಮಾಡಿ, ವಿಶೇಷ ಪೂಜೆ ಸಲ್ಲಿಸಿ ವಿಷ್ಣುದಾದಾನನ್ನು ಸ್ಮರಿಸಲಿದ್ದಾರೆ.
Recommended Video
ಇನ್ನು ಭಾರತಿ ವಿಷ್ಣುವರ್ಧನ್ ಮೈಸೂರಿನಲ್ಲಿ ಸ್ಮಾರಕ ಪೂಜೆ ಸಲ್ಲಿಸಲಿದ್ದಾರೆ. ಜೊತೆಗೆ ಅಭಿಮಾನಿಗಳು ಸಹ ಭಾಗಿಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪುಣ್ಯಸ್ಮರಣೆಯ ಅಂಗವಾಗಿ ಅಭಿಮಾನಿಗಳಿಂದ ಅನ್ನದಾನ ಸೇರಿದಂತೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇದೆ.