Don't Miss!
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- News Bengaluru Rain: ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಜಿನುಗು ಮಳೆ.. ಮನೆಯಿಂದ ಹೊರಬಂದು ಕುಣಿದು ಕುಪ್ಪಳಿಸಿದ ಮಕ್ಕಳು
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 11ನೇ ಪುಣ್ಯ ಸ್ಮರಣೆ
ಕನ್ನಡದ ಮೇರು ನಟ, ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 11ನೇ ಪುಣ್ಯತಿಥಿ ಆಚರಿಸಲಾಗುತ್ತಿದೆ. ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವ ವಿಷ್ಣುದಾದಾ ಅಗಲಿ ಇಂದಿಗೆ 11 ವರ್ಷಗಳು ಕಳೆದಿವೆ. ಆದರೂ ವಿಷ್ಣು ಕನ್ನಡ ಚಿತ್ರಪ್ರಿಯರ ಮನದಲ್ಲಿ ಇಂದಿಗೂ ಜೀವಂತವಾಗಿದ್ದಾರೆ.
2009 ಡಿಸೆಂಬರ್ 30 ಕನ್ನಡ ಚಿತ್ರರಂಗದ ಪಾಲಿನ ಕರಾಳದಿನ. ಅದ್ಭುತ ಸಿನಿಮಾಗಳನ್ನು ಮಾಡುತ್ತ ಅಭಿಮಾನಿಗಳನ್ನು ರಂಜಿಸುತ್ತಿದ್ದ ವಿಷ್ಣು ದಾದಾ ಮರೆಯಾದ ದಿನವಿದು. 11ವರ್ಷಗಳ ಹಿಂದೆ ಇದೇ ದಿನ ಇಡೀ ಚಿತ್ರರಂಗ ಶೋಕಸಾಗರದಲ್ಲಿ ಮುಳುಗಿತ್ತು. ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅನಾಥಮಾಡಿ, ವಿಷ್ಣುದಾದಾ ಬಾರದ ಲೋಕಕ್ಕೆ ಹೊರಟು ಹೋಗಿದ್ದರು.
ಸಾಹಸಿಂಹ ಮರೆಯಾಗಿ11 ವರ್ಷಗಳು ಕಳೆದಿವೆ. ಇಂದು ಅವರ ಪುಣ್ಯ ಸ್ಮರಣೆ. ಅಭಿಮಾನಿಗಳು ವಿಷ್ಣುವರ್ಧನ್ ಸಮಾಧಿ ಇರುವ ಅಭಿಮಾನ್ ಸ್ಟುಡಿಯೋಗೆ ಬಂದು ನೆಚ್ಚಿನ ನಟನ ಸಮಾಧಿಗೆ ನಮನ ಸಲ್ಲಿಸಲಿದ್ದಾರೆ. ಸಮಾಧಿಗೆ ಹೂವಿನಿಂದ ಅಲಂಕಾರ ಮಾಡಿ, ವಿಶೇಷ ಪೂಜೆ ಸಲ್ಲಿಸಿ ವಿಷ್ಣುದಾದಾನನ್ನು ಸ್ಮರಿಸಲಿದ್ದಾರೆ.
Recommended Video
ಇನ್ನು ಭಾರತಿ ವಿಷ್ಣುವರ್ಧನ್ ಮೈಸೂರಿನಲ್ಲಿ ಸ್ಮಾರಕ ಪೂಜೆ ಸಲ್ಲಿಸಲಿದ್ದಾರೆ. ಜೊತೆಗೆ ಅಭಿಮಾನಿಗಳು ಸಹ ಭಾಗಿಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪುಣ್ಯಸ್ಮರಣೆಯ ಅಂಗವಾಗಿ ಅಭಿಮಾನಿಗಳಿಂದ ಅನ್ನದಾನ ಸೇರಿದಂತೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇದೆ.