Don't Miss!
- News Gold & Silver Price: ಮತ್ತೆ ಏರಿದ ಚಿನ್ನದ ದರ, ಇಂದಿನ ಬೆಳ್ಳಿ-ಬಂಗಾರದ ಬೆಲೆ ವಿವರ ತಿಳಿಯಿರಿ
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಜಾಮೀನು ತೀರ್ಪು ಸೆ.13 ಮುಂದೂಡಿಕೆ
ದರ್ಶನ್ಗೆ ಜಾಮೀನು ನೀಡದಂತೆ ವಿಜಯನಗರ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಬ್ಬರ ವಾದ ವಿವಾದಗಳನ್ನು ಆಲಿಸಿದ ನ್ಯಾಯಾಲಯ ದರ್ಶನ್ ಜಾಮೀನು ಅರ್ಜಿ ಆದೇಶವನ್ನು ಮಂಗಳವಾರಕ್ಕೆ ಕಾದಿರಿಸಿದೆ. ಸೋಮವಾರ (ಸೆ.12) ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಆರಂಭವಾಯಿತು.
ವಿಚಾರಣೆ ಸಂದರ್ಭದಲ್ಲಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಸೇರಿದಂತೆ ಕನ್ನಡ ಚಲನಚಿತ್ರ ನಿರ್ಮಾಪಕ ಸಾ ರಾ ಗೋವಿಂದು, ದರ್ಶನ್ ಸಹೋದರ ತೂಗುದೀಪ ದಿನಕರ್ ಉಪಸ್ಥಿತರಿದ್ದರು. ವಿಜಯಲಕ್ಷ್ಮಿ ಅವರ ಬೆರಳುಗಳಿಗೆ ಆಗಿರುವ ಗಾಯ ಗಂಭೀರವಲ್ಲ. ಕೈ ಬೆರಳುಗಳು ದೇಹದ ಪ್ರಮುಖ ಅಂಗ ಅಲ್ಲ ಎಂದು ಅವರ ಪರ ವಕೀಲ ಕೃಷ್ಣೇಗೌಡ ವಾದಿಸಿದರು.
ವಿಜಯಲಕ್ಷ್ಮಿ ಅವರ ಪ್ರಕರಣ ಕೊಲೆ ಕೃತ್ಯವಲ್ಲ (ಐಪಿಸಿ ಸೆಕ್ಷನ್ 307) ಅದು ಗಾಯಗೊಳಿಸುವ ಯತ್ನ (ಐಪಿಸಿ ಸೆಕ್ಷನ್ 324). ಹಾಗಾಗಿ ಅವರ ವಿರುದ್ಧ ದಾಖಲಿಸಿರುವ ಸೆಕ್ಷನ್ 307ರ ಬದಲಾಗಿ ಸೆಕ್ಷನ್ 324 ದಾಖಲಿಸಬೇಕು ಎಂದು ನ್ಯಾಯಾಲಯವನ್ನು ಕೋರಿದರು. ವಾದ ವಿವಾದವನ್ನು ಆಲಿಸಿದ ನ್ಯಾಯಾಧೀಶರು ಆದೇಶವನ್ನು ಮಂಗಳವಾರಕ್ಕೆ ತೀರ್ಪನ್ನು ಮುಂದೂಡಿದ್ದಾರೆ.
ಈ ಮೂಲಕ ನಟ ದರ್ಶನ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಇಂದು ತೀರ್ಪು ಹೊರಬೀಳುತ್ತದೆ ಎಂದು ದರ್ಶನ್ ಅಭಿಮಾನಿಗಳು ಸೇರಿದಂತೆ ನಿರ್ಮಾಪಕರು ತೀವ್ರ ಆತಂಕ ಮತ್ತು ಕುತೂಹದಲ್ಲಿದ್ದರು. ಆದರೆ ಮಂಗಳವಾರಕ್ಕೆ ತೀರ್ಪು ಮುಂದೂಡಿರುವ ಕಾರಣ ದರ್ಶನ್ ಅಭಿಮಾನಿಗಳಲ್ಲಿ ಮತ್ತಷ್ಟು ಆತಂಕ ನೆಲಸಿದೆ. (ದಟ್ಸ್ಕನ್ನಡ ಸಿನಿವಾರ್ತೆ)