twitter
    For Quick Alerts
    ALLOW NOTIFICATIONS  
    For Daily Alerts

    ಪಾರ್ವತಮ್ಮ ರಾಜ್‌ಕುಮಾರ್ ಜತೆ ಸಂವಾದ

    |

    ಕರ್ನಾಟಕ ಚಲನಚಿತ್ರ ಅಕಾಡೆಮಿ ತನ್ನ ವಿನೂತನ ಕಾರ್ಯಕ್ರಮವಾದ "ಬೆಳ್ಳಿಹೆಜ್ಜೆ" ಕಾರ್ಯಕ್ರಮವನ್ನು ಹಿರಿಯ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್‌ಕುಮಾರ್ ಅವರೊಂದಿಗೆ ಸಂವಾದ ಕಾರ್ಯಕ್ರಮದ ಮೂಲಕ ನವೆಂಬರ್ 14 ರಂದು ಆರಂಭಿಸಲಿದೆ.

    ಕನ್ನಡ ಚಿತ್ರರಂಗದ ದಿಗ್ಗಜರನ್ನು ವಿಶಿಷ್ಟ ಬಗೆಯಲ್ಲಿ ಪರಿಚಯಿಸುವ ಹಾಗೂ ಅವರೊಂದಿಗೆ ಸಂವಾದ ನಡೆಸುವ ಬೆಳ್ಳಿಹೆಜ್ಜೆ ಕಾರ್ಯಕ್ರಮವನ್ನು ಈ ಮಾಹೆಯಿಂದ ಪ್ರಾರಂಭಮಾಡಲಿದೆ.
    ನವೆಂಬರ್ 14 ರಂದು ಸಂಜೆ 4.30 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ 'ಬೆಳ್ಳಿಹೆಜ್ಜೆ' ಪ್ರಥಮ ಕಾರ್ಯಕ್ರಮ ನಡೆಯಲಿದ್ದು ಇದರ ಅಂಗವಾಗಿ ಛಾಯಾಚಿತ್ರ ಹಾಗೂ ಕಿರುಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

    (ದಟ್ಸ್ ಕನ್ನಡ ಚಿತ್ರವಾರ್ತೆ)

    Thursday, November 12, 2009, 17:57
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X