Don't Miss!
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles ಹೊಸ ಸುಜುಕಿ V-Strom 800 DE ಬೈಕ್ ಬಿಡುಗಡೆ: ಬೆಲೆ ರೂ.10.30 ಲಕ್ಷ
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೀತಪ್ರಿಯರಿಗೆ ನೆರವಿನ ಹಸ್ತ ಚಾಚಿದ ಐಟಿ ಕನ್ನಡಿಗರು
ಅರ್ಥಪೂರ್ಣ ಗೀತೆಗಳ ಮೂಲಕ ಕನ್ನಡಿಗರ ಮನಗೆದ್ದ ಗೀತಸಾಹಿತಿ ಗೀತಪ್ರಿಯ (ಲಕ್ಷ್ಮಣರಾವ್ ಮೋಹಿತೆ). ಈಗವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಗಂಟಲ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಬಳಿಕ ಹಾಸಿಗೆ ಹಿಡಿದಿದ್ದಾರೆ.
ಇತ್ತೀಚೆಗೆ ಬೆಂಗಳೂರು ಐ.ಟಿ ಕನ್ನಡಿಗರು ಗೀತಪ್ರಿಯ ಅವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದರು. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಿವಾಸಕ್ಕೆ ಭೇಟಿ ನೀಡಿದ ಅವರು ಹಿರಿಯ ಚೇತನ ಗೀತಪ್ರಿಯ ಅವರಲ್ಲಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ಐ.ಟಿ ಕನ್ನಡಿಗರಾದ ಆನಂದ್ ಎಂಬಿ, ದಿನೇಶ್ ಅಡಿಗ, ಸುರೇಶ್ ಎಚ್ ಎಂ, ರವೀಂದ್ರ ಪ್ರತಾಪ್ ಜೈನ್ ಹಾಗೂ ಮಂಜುನಾಥ ಗೌಡ ಅವರು ತಮ್ಮ ವತಿಯಿಂದ ರು.25 ಸಾವಿರದ ಡಿಡಿಯನ್ನು ಗೀತಪ್ರಿಯರಿಗೆ ಹಸ್ತಾಂತರಿಸಿದ್ದಾರೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.
ಗೀತಪ್ರಿಯ ಅವರ ಚಿಕಿತ್ಸೆಗೆ ಇನ್ನಷ್ಟು ಆರ್ಥಿಕ ಸಹಾಯ ಬೇಕಾಗಿದೆ. ಮುಂದೆಯೂ ಅವರಿಗೆ ಹಣದ ಸಹಾಯ ಮಾಡುವುದಾಗಿ ಐ.ಟಿ ಕನ್ನಡಿಗ ಆನಂದ್ ಎಂಬಿ ತಿಳಿಸಿದ್ದಾರೆ. ಎರಡನೇ ಕಂತಿನ ಹಣವನ್ನು ಅವರಿಗೆ ಶೀಘ್ರದಲ್ಲೇ ಹಸ್ತಾಂತರಿಸಲಿರುವುದಾಗಿ ತಿಳಿಸಿದ್ದಾರೆ. ಎಲ್ಲರ ಸಹಕಾರ ನಿರೀಕ್ಷಿಸಿರುವ ಅವರು ತಮ್ಮ ಇ-ಮೇಲ್ [email protected] ಮೂಲಕ ಸಂಪರ್ಕಿಸಲು ಕೋರಿದ್ದಾರೆ. (ಏಜೆನ್ಸೀಸ್)