Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಮ್ಯಾ 'ಜೊತೆಗಾರ'ನಿಗೆ ಕಡೆಗೂ ಬಿಡುಗಡೆ ಭಾಗ್ಯ
ಸುದೀರ್ಘ ಸಮಯದಿಂದ ಬಿಡುಗಡೆಗಾಗಿ ಹಂಬಲಿಸುತ್ತಿದ್ದ 'ಜೊತೆಗಾರ' ಚಿತ್ರಕ್ಕೆ ಕಡೆಗೂ ಮೋಕ್ಷ ಲಭಿಸಿದೆ. ಈ ವಿಷಯವನ್ನು ಸ್ವತಃ ಚಿತ್ರದ ನಾಯಕಿ ರಮ್ಯಾ ಸ್ಪಷ್ಟಪಡಿಸಿದ್ದಾರೆ. ಇದೀಗ ಚಿತ್ರಕ್ಕೆ ಮತ್ತೊಂದು ಹಾಡನ್ನು ಸೇರ್ಪಡೆ ಮಾಡಿ ಅಂತಿಮ ಸ್ಪರ್ಶ ನೀಡಲಾಗುತ್ತಿದೆ.
ಸದ್ಯಕ್ಕೆ ಚಿಕ್ಲಿ ಹೊಳೆಯಲ್ಲಿ ರಮ್ಯಾ ಮತ್ತು ಚಿರಂಜೀವಿ ಸರ್ಜಾ ಅಭಿನಯದ 'ದಂಡಂ ದಶಗುಣಂ' ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರವನ್ನು ಸೆಪ್ಟೆಂಬರ್ 10ರಂದು ತೆರೆಗೆ ತರುವ ಪ್ರಯತ್ನದಲ್ಲಿದ್ದಾರೆ ಚಿತ್ರ ನಿರ್ಮಾಪಕ ಗಣೇಶ್.
ಅಂದಹಾಗೆ 'ಜೊತೆಗಾರ' ಚಿತ್ರದ ನಾಯಕ ನಟ ಪ್ರೇಮ್ ಕುಮಾರ್ ಮತ್ತು ಜೆನ್ನಿಫರ್ ಕೊತ್ವಾಲ್ ನಡುವಿನ ಹಾಡಿನ ಚಿತ್ರೀಕರಣ ಬೆಂಗಳೂರಿನ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆದಿದೆ. ಒಟ್ಟು ರು.25 ಲಕ್ಷದಲ್ಲಿ ಹಾಡಿನ ಚಿತ್ರೀಕರಣ ನಡೆದಿದೆ ಎನ್ನುತ್ತವೆ ಮೂಲಗಳು. ಈ ಹಾಡಿಗೆ ಹ್ಯಾಟ್ರಿಕ್ ನಿರ್ದೇಶಕ ಪ್ರೇಮ್ ಆಕ್ಷನ್, ಕಟ್ ಹೇಳಿರುವುದು ವಿಶೇಷ.
ಈ ಚಿತ್ರಕ್ಕಾಗಿ ಐಡಿಬಿಐ ಸಾಲ ನೀಡಿತ್ತು. ಸಾಲ ತೀರಿಸದೆ ಚಿತ್ರ ಬಿಡುಗಡೆಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಐಡಿಬಿಐ ಪಟ್ಟುಹಿಡಿಯಿತು. ಹಾಗಾಗಿ ಜೊತೆಗಾರ ಡಬ್ಬದಲ್ಲೇ ಕೊಳೆಯುವಂತಾಗಿತ್ತು. ನಿರ್ಮಾಪಕ ಅಶ್ವಿನಿ ರಾಂ ಪ್ರಸಾದ್ ಸಂಪೂರ್ಣವಾಗಿ ದಿವಾಳಿಯಾಗಿದ್ದಾರೆ ಎಂಬ ಮಾತುಗಳು ಚಿತ್ರೋದ್ಯಮದಲ್ಲಿ ಕೇಳಿಬಂದಿದ್ದವು. ಈಗ ಎಲ್ಲ ಸಮಸ್ಯೆಗಳಿಂದ ಮುಕ್ತನಾಗಿರುವ ಜೊತೆಗಾರ ಶೀಘ್ರದಲ್ಲೆ ತೆರೆಗೆ ಅಪ್ಪಳಿಸಲಿದೆ.