Don't Miss!
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಲೋಕಸಭಾ ಚುನಾವಣೆ 2024: ಟಾಪ್ 10 ಶ್ರೀಮಂತ ಅಭ್ಯರ್ಥಿಗಳು ಇವರು
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- News ಲೋಕಸಭೆ ಚುನಾವಣೆ : ಶೇ 100ರಷ್ಟು ಮತದಾನವಾದರೆ ಸಿಗಲಿದೆ ಪ್ರಶಸ್ತಿ
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಮ್ಮುಟ್ಟಿ ಜೊತೆ ಅಭಯಸಿಂಹ 'ಶಿಕಾರಿ'
ಕಡೆಗೂ ಮಮ್ಮುಟ್ಟಿ ಅಭಿನಯಿಸಲಿರುವ ಕನ್ನಡಚಿತಕ್ಕೆ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಅಭಯಸಿಂಹ ಆಕ್ಷನ್, ಕಟ್ ಹೇಳುವ ಶುಭ ಸಂದರ್ಭ ಒದಗಿಬಂದಿದೆ. 'ಗುಬ್ಬಚ್ಚಿಗಳು' ಮಕ್ಕಳ ಚಿತ್ರಕ್ಕಾಗಿ ಅಭಯಸಿಂಹ ಅವರಿಗೆ 2008ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಒಲಿದಿತ್ತು. ಈಗ ಇವರು ಕೈಗೆತ್ತಿಕೊಂಡಿರುವ ಚಿತ್ರಕ್ಕೆ 'ಶಿಕಾರಿ' ಎಂದು ಹೆಸರಿಡಲಾಗಿದೆ.
ಚಿತ್ರರಂಗದ ಮೂಲಗಳ ಪ್ರಕಾರ 'ಶಿಕಾರಿ'ಯಲ್ಲಿ ಮಮ್ಮುಟ್ಟಿ ದ್ವಿಪಾತ್ರಾಭಿನಯ ಮಾಡಲಿದ್ದಾರೆ. ಒಂದು ಸಾಫ್ಟ್ ವೇರ್ ತಂತ್ರಜ್ಞನ ಪಾತ್ರವಾದರೆ ಮತ್ತೊಂದು ಸ್ವಾತಂತ್ರ್ಯ ಹೋರಾಟಗಾರನ ಪಾತ್ರವಂತೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥಾ ಹಂದರ 'ಶಿಕಾರಿ' ಚಿತ್ರಕ್ಕಿದೆ.
ನಿರ್ದೇಶನದ ಜೊತೆಗೆ ಕತೆ, ಚಿತ್ರಕತೆಯ ಜವಾಬ್ದಾರಿಯನ್ನು ಅಭಯಸಿಂಹ ಅವರೆ ಹೊತ್ತಿದ್ದಾರೆ. ಬಾಲಿವುಡ್ ನಟಿ ಕೊಂಕಣಸೇನ್ ಶರ್ಮಾ ಅವರನ್ನು ಕನ್ನಡಕ್ಕೆ ಕರೆತರುವ ಪ್ರಯತ್ನವನ್ನು ಅಭಯಸಿಂಹ ಮಾಡುತ್ತಿದ್ದಾರೆ. ಚಿತ್ರೀಕರಣ ಮೇ ತಿಂಗಳ ಮೊದಲ ವಾರದಲ್ಲಿ ಆರಂಭವಾಗಲಿದೆ.
ಕೆ ಮಂಜು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅನ್ ಮೋಲ್ ಭಾವೆ ಸಂಗೀತ, ವಿಕ್ರಂ ಶ್ರೀವತ್ಸ ಛಾಯಾಗ್ರಹಣವಿದೆ. ಒಟ್ಟಿನಲ್ಲಿ ಪ್ರತಿಭಾನಿತ್ವ ನಟ, ನಿರ್ದೇಶಕರು ಕೂಡಿ ಮಾಡುತ್ತಿರುವ ಚಿತ್ರ ಶಿಕಾರಿ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.