Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫಿಲಂ ಚೇಂಬರ್ ಸದಸ್ಯರಿಗೆ ಬೆಂಡೆತ್ತಿದ ಎಂಎಸ್ ಸತ್ಯು
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರನ್ನು ಖ್ಯಾತ ನಿರ್ದೇಶಕ ಎಂಎಸ್ ಸತ್ಯು ಬೆಂಡೆತ್ತಿದ್ದಾರೆ. ಫಿಲಂ ಚೇಂಬರ್ ಸದಸ್ಯರ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದು ಕಲಾತ್ಮಕ ಚಿತ್ರಗಳನ್ನು ಕಡೆಗಣಿಸುತ್ತಿರುವ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹೊಸ ರಕ್ತ ಹರಿಯುತ್ತಿಲ್ಲ. ಪ್ರತಿ ವರ್ಷ ಅದೇ ಅದೇ ಮುಖಗಳು. ಇವರಿಗೆ ಪರಭಾಷಾ ಚಿತ್ರಗಳ ಮೇಲಿನ ಮಮಕಾರ ಮಾತೃಭಾಷೆಯ ಚಿತ್ರಗಳ ಮೇಲಿಲ್ಲ. ಅತ್ಯುತ್ತಮ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ಪಿ.ಶೇಷಾದ್ರಿ ಅಂತಹವರನ್ನು ಫಿಲಂ ಚೇಂಬರ್ ಕಡೆಗಣಿಸುತ್ತಿದೆ ಎಂದು ಸತ್ಯು ಬೇಸರಿಸಿಕೊಂಡಿದ್ದಾರೆ.
ಕನ್ನಡದಲ್ಲಿ ನಿರ್ಮಾಣವಾದ ಅತ್ಯುತ್ತಮ ಚಿತ್ರಗಳು ಚಿತ್ರಮಂದಿರ ಸಮಸ್ಯೆಯನು ಎದುರಿಸುತ್ತಿವೆ. ಇದನ್ನು ಪರಿಹರಿಸುವ ಪ್ರಯತ್ನವನ್ನು ಫಿಲಂ ಚೇಂಬರ್ ಮಾಡುತ್ತಿಲ್ಲ. ರೀಮೇಕ್ ಚಿತ್ರಗಳಿಗೆ ಇವರು ರತ್ನಗಂಬಳಿ ಸ್ವಾಗತ ಕೋರುತ್ತಿದ್ದಾರೆ. ಆದರೆ ಕಲಾತ್ಮಕ ಚಿತ್ರಗಳಿಗೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ ಎಂದಿರುವ ಸತ್ಯು ಫಿಲಂ ಚೇಂಬರ್ ಸದಸ್ಯರನ್ನು 'ಪುಂಡರು' ಎಂದೂ ಜರಿದಿದ್ದಾರೆ. (ಏಜೆನ್ಸೀಸ್)